Home ತಾಜಾ ಸುದ್ದಿ ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಯೋಗಿ ಆದಿತ್ಯನಾಥ್​ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ಯೋಗಿ ಆದಿತ್ಯನಾಥ್​ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

0

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಬೆನ್ನಲ್ಲೇ ನಿಖಿಲ್ ಕುಮಾರಸ್ವಾಮಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿ ಮಾಡಿ ಬಿಜೆಪಿ ಜೊತೆಗಿನ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಿಖಿಲ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜೀ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಾಯಿತು. ಲೋಕಸಭೆ ಚುನಾವಣೆ ಎದುರಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ಆಗಿರುವ ಜೆಡಿಎಸ್ – ಬಿಜೆಪಿ ಮೈತ್ರಿಯ ಬಗ್ಗೆ ಅವರೊಂದಿಗೆ ಚರ್ಚಿಸಲಾಯಿತು. ಇದು ಅತ್ಯಂತ ಉತ್ತಮ ಬೆಳವಣಿಗೆ ಎಂದು ಅವರು ಸಂತಸ ವ್ಯಕ್ತಪಡಿಸಿದರು. ಇದೇ ವೇಳೆ ಉತ್ತರ ಪ್ರದೇಶ ರಾಜಕಾರಣದ ಹಲವಾರು ಬೆಳವಣಿಗೆಗಳನ್ನು ಅವರು ಹಂಚಿಕೊಂಡರು. ಅವರು ಅತ್ಯಂತ ಪ್ರೀತಿ, ವಾತ್ಸಲ್ಯದಿಂದ ನನ್ನನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಪ್ರೀತಿಯಿಂದ ಸತ್ಕರಿಸಿದ ನಿಮಗೆ ಧನ್ಯವಾದಗಳು ಯೋಗಿ ಜೀ… ಎಂದು ನಿಖಿಲ್ ಫೋಸ್ ಹಂಚಿಕೊಂಡಿದ್ದಾರೆ.

ಇನ್ನು ನಿಖಿಲ್ ಕುಮಾರಸ್ವಾಮಿ ಅವರು ಯೋಗಿ ಆದಿತ್ಯನಾಥ್ ಅವರಿಗೆ ರಾಮ, ಲಕ್ಷ್ಮಣ, ಸೀತೆ ವಿಗ್ರಹ ಗಿಫ್ಟ್ ಮಾಡಿದ್ದಾರೆ.

LEAVE A REPLY

Please enter your comment!
Please enter your name here