Home ಕರಾವಳಿ ಮಹಿಳೆಗೆ ಕಚ್ಚಿದ ದರ್ಶನ್‌ ಮನೆಯ ಸಾಕು ನಾಯಿ ಪ್ರಕರಣ: ಕಾರ್‌ ಪಾರ್ಕ್‌ ಮಾಡಿದಕ್ಕೆ ಬೇಕಾಂತಲೆ...

ಮಹಿಳೆಗೆ ಕಚ್ಚಿದ ದರ್ಶನ್‌ ಮನೆಯ ಸಾಕು ನಾಯಿ ಪ್ರಕರಣ: ಕಾರ್‌ ಪಾರ್ಕ್‌ ಮಾಡಿದಕ್ಕೆ ಬೇಕಾಂತಲೆ ನಾಯಿ ಬಿಟ್ಟು ದಾಳಿ ಮಾಡಿಸಿದ್ದಾರೆ – ಮಹಿಳೆ ಆರೋಪ

0

ಸಾಕು ನಾಯಿ ದಾಳಿ ಮಾಡಿದೆಯೆಂದು ಖ್ಯಾತ ನಟ ತೂಗುದೀಪ ದರ್ಶನ್ ವಿರುದ್ಧ ಮಹಿಳಾ ವೈದ್ಯೆಯೊಬ್ಬರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಅದರಂತೆ ದರ್ಶನ್‌ ಅವರ ವಿರುದ್ಧ ರಾಜರಾಜೇಶ್ವರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಪರ್ಶ ಆಸ್ಪತ್ರೆಗೆ ಪಾರ್ಶ್ವವಾಯು ದಿನದ ಕಾರ್ಯಕ್ರಮಕ್ಕೆ ಬಂದಿದ್ದಾಗ ವೈದ್ಯೆ ಮೇಲೆ ನಾಯಿಗಳು ದಾಳಿ ಮಾಡಿವೆ.

ಬೇರೆಡೆ ಕರೆದುಕೊಂಡು ಹೋಗುವಂತೆ ದರ್ಶನ್‌ ಸೆಕ್ಯೂರಿಟಿ ಗಾರ್ಡ್‌ ಗೆ ಸೂಚಿಸಿದರೂ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ತಮಗೆ ನಾಯಿಗಳು ಕಚ್ಚಿವೆ, ಹೀಗಾಗಿ ಮಾಲೀಕ ದರ್ಶನ್ ಹಾಗೂ ನಾಯಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವೈದ್ಯೆ ಅಮಿತಾ ಜಿಂದಾಲ್ ದೂರಿದ್ದರು

ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ಘಟನೆ ನಡೆಯುವ ಮುನ್ನ ದರ್ಶನ್​ರ ಮನೆ ಸಿಬ್ಬಂದಿ ತನ್ನೊಂದಿಗೆ ವಾಗ್ವಾದ ಮಾಡಿದ್ದರು ಎಂದು ಮಹಿಳೆ ಆರೋಪಿಸಿದ್ದಾರೆ.

ಮಹಿಳೆ ದೂರಿನಲ್ಲಿ ಹೇಳಿಕೊಂಡಿರುವಂತೆ ಆರ್​ ಆರ್​ ನಗರದಲ್ಲಿ ಆಸ್ಪತ್ರೆ ಕಾರ್ಯಕ್ರಮವೊಂದಕ್ಕೆ ಮಹಿಳೆ ಆಗಮಿಸಿದ್ದರು. ದರ್ಶನ್ ಮನೆಯ ಬಳಿ ಖಾಲಿ ಜಾಗದಲ್ಲಿ ತಮ್ಮ ಕಾರನ್ನು ಮಹಿಳೆ ನಿಲ್ಲಿಸಿದ್ದರು. ಕಾರ್ಯಕ್ರಮ ಮುಗಿಸಿ ಮರಳಿ ಬಂದಾಗ ಕಾರು ನಿಲ್ಲಿಸಿದ್ದ ಜಾಗದಲ್ಲಿ ಮೂರು ನಾಯಿಗಳು ಇದ್ದವಂತೆ. ದರ್ಶನ್​ರ ಮನೆ ಸಿಬ್ಬಂದಿಗೆ ನಾಯಿಗಳನ್ನು ಪಕ್ಕಕ್ಕೆ ಕರೆದುಕೊಳ್ಳುವಂತೆ ಮಹಿಳೆ ಕೇಳಿದ್ದಾರೆ.

ಆಗ ವಾಗ್ವಾದ ನಡೆಸಿರುವ ದರ್ಶನ್ ಮನೆಯ ಸಿಬ್ಬಂದಿ, ಈ ಜಾಗದಲ್ಲಿ ನೀವು ಕಾರು ಪಾರ್ಕ್ ಮಾಡುವಂತಿಲ್ಲ ಎಂದಿದ್ದಾರೆ. ಮಹಿಳೆ ಹಾಗೂ ದರ್ಶನ್​ರ ಸಿಬ್ಬಂದಿ ನಡುವೆ ವಾಗ್ವಾದ ನಡೆದಿದೆ. ಬಳಿಕ ನಾಯಿಗಳು ಮಹಿಳೆಯ ಮೇಲೆ ದಾಳಿ ನಡೆಸಿ ಹೊಟ್ಟೆ ಹಾಗೂ ಕೈಗೆ ಕಚ್ಚಿ ಗಾಯಗೊಳಿಸಿವೆ.

LEAVE A REPLY

Please enter your comment!
Please enter your name here