Home ಕರಾವಳಿ ಮನೀಶ್ ಕುಲಾಲ್ ಮನೆಗೆ ನುಗ್ಗಿ ಬೆದರಿಕೆ – ಅಜಿತ್ ರೈ ಹೊಸಮನೆ ವಿರುದ್ಧ ದೂರು...

ಮನೀಶ್ ಕುಲಾಲ್ ಮನೆಗೆ ನುಗ್ಗಿ ಬೆದರಿಕೆ – ಅಜಿತ್ ರೈ ಹೊಸಮನೆ ವಿರುದ್ಧ ದೂರು ದಾಖಲು

0

ಪುತ್ತೂರು: ಮಗನ ಮೇಲೆ ಜೀವಬೆದರಿಕೆ ಇದೆಯೆಂದು ಈ ಹಿಂದೆ ನಡೆದ ಘಟನೆಗೆ ಸಂಬಂಧಿಸಿದಂತೆ ಇದೀಗ ಹಲ್ಲೆ ಯತ್ನ ನಡೆದಾಗ ಮನೀಶ್ ಕುಲಾಲ್ ತಂದೆ ಆನಂದ್ ಎಂಬವರು ಹಿಂದೂ ಜಾಗರಣ ವೇದಿಕೆಯ ಮುಖಂಡ ಅಜಿತ್ ರೈ ಹೊಸಮನೆ ಮೇಲೆ ದೂರು ದಾಖಲಿಸಿದ್ದಾರೆ.

ತನ್ನ ಮನೆಗೆ ಅಕ್ರಮ ಪ್ರವೇಶ ಮಾಡಿ ಮಗನಿಗೆ ಹಲ್ಲೆಯತ್ನ ನಡೆಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವಬೆದರಿಕೆಯೊಡ್ಡಿರುವುದಾಗಿ ಆರೋಪಿಸಿ ಅಜಿತ್ ರೈ ಹೊಸಮನೆ ವಿರುದ್ಧ ಆನಂದ ಎಸ್.ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ನ.10ರಂದು ದೂರು ನೀಡಿದ್ದಾರೆ.

ಜುಲೈ 10ರಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಆರೋಪಿತ ಅಜಿತ್ ರೈ ಹೊಸಮನೆ ಅವರು ಮನೆಗೆ ಅಕ್ರಮವಾಗಿ ಪ್ರವೇಶಿಸಿ ನನ್ನ ಮಗ ಮನೀಶ್ ಕುಲಾಲ್ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿ ಅವಾಚ್ಯ ಶಬ್ದಗಳಿಂದ ಬೈದು ಮಗನಿಗೆ ಜೀವ ಬೆದರಿಕೆ ಒಡ್ಡಿರುವುದು ನನಗೆ ತಡವಾಗಿ ತಿಳಿದಿರುತ್ತದೆ.ಈ ವಿಷಯವನ್ನು ದೊಡ್ಡದು ಮಾಡಬಾರದೆಂದು ನನ್ನ ಮಕ್ಕಳು ನನಗೆ ತಿಳಿಸಿರಲಿಲ್ಲ.ಆದರೆ ನ.10ರಂದು ಮಗ ಮನೀಶ್ ಕುಲಾಲ್‌ನ ಮೇಲೆ ಹಲ್ಲೆ ಮಾಡಿ ಹತ್ಯೆಯ ಸಂಚು ಮಾಡಿರುವುದು ಆತಂಕ ಸೃಷ್ಟಿ ಮಾಡಿದೆ.

ಈ ಕೃತ್ಯದ ಹಿಂದೆ ಆರೋಪಿತರ ಕೈವಾಡವಿರುವುದರಿಂದ ಆರೋಪಿತ ಅಜಿತ್ ರೈ ಹೊಸಮನೆ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕಾಗಿ ಮನೀಶ್ ಕುಲಾಲ್ ಅವರ ತಂದೆ ಪಡೀಲ್ ನಿವಾಸಿ ಆನಂದ್ ಎಸ್.ಅವರು ಪುತ್ತೂರು ನಗರ ಪೊಲೀಸರಿಗೆ ನ.10ರಂದು ದೂರು ನೀಡಿದ್ದಾರೆ.

ಈ ದೂರಿನ ಮೇರೆಗೆ ಪೊಲೀಸರು ಅಜಿತ್ ರೈ ವಿರುದ್ಧ ಸೆಕ್ಷನ್ 447,504, 506 ರಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here