ಮಂಗಳೂರು: ಕೆಲವೇ ದಿನಗಳಲ್ಲಿ ಕಾಂಗ್ರೆಸ್ನಿಂದ 30-40 ಶಾಸಕರು ಹೊರಗೆ ಬರುತ್ತಾರೆ ಎಂಬುದಾಗಿ ಸಂಸದ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದ್ದಾರೆ.



ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಾಂಗ್ರೆಸ್ನ ಒಳಗೆ ಆಂತರಿಕ ಜಗಳ ಜಾಸ್ತಿಯಾಗಿದೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತು ಸತೀಶ್ ಜಾರಕಿಹೊಳಿ ತಂಡ ಇಬ್ಬಾಗವಾಗುತ್ತಿದೆ.ಅದರ ಮಧ್ಯೆ ಮರಿ ಖರ್ಗೆ ಮುಖ್ಯಮಂತ್ರಿ ಬೇಡಿಕೆ ಇಡುತ್ತಿದ್ದಾರೆ.

ಕಾಂಗ್ರೆಸ್ ಡಿವೈಡ್ ಆಗುತ್ತಿದೆ ಎಂದರು.
ಹಸ್ತದ ಒಳಗೆ ಹಸ್ತದ ಆಪರೇಷನ್ ಆಗುತ್ತಿದೆ. ಕೆಲವೇ ದಿನಗಳಲ್ಲಿ 30-40 ಶಾಸಕರು ಹೊರಗೆ ಬರುತ್ತಾರೆ ಎಂದು ಭವಿಷ್ಯವನ್ನು ನುಡಿದಿದ್ದಾರೆ.