Home ತಾಜಾ ಸುದ್ದಿ ಮೂಡುಬಿದಿರೆ: 29 ನೇ ವರ್ಷದ ಆಳ್ವಾಸ್ ವಿರಾಸತ್ 2023 ರಾಷ್ಟೀಯ ಸಾಂಸ್ಕೃತಿಕ ಉತ್ಸವ

ಮೂಡುಬಿದಿರೆ: 29 ನೇ ವರ್ಷದ ಆಳ್ವಾಸ್ ವಿರಾಸತ್ 2023 ರಾಷ್ಟೀಯ ಸಾಂಸ್ಕೃತಿಕ ಉತ್ಸವ

0

ಮೂಡುಬಿದಿರೆ: ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದದೊಂದಿಗೆ ದೇಶಕ್ಕಾಗಿ ದೇಹತ್ಯಾಗ ಮಾಡಿದ ವೀರಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅವರಿಗೆ ಅರ್ಪಣೆ 29 ನೇ ವರ್ಷದ ಆಳ್ವಾಸ್ ವಿರಾಸತ್ 2023 ರಾಷ್ಟೀಯ ಸಾಂಸ್ಕೃತಿಕ ಉತ್ಸವವು ಡಿ.14 ರಿಂದ 17 ರ ವರೆಗೆ ಶ್ರೀಮತಿ ವನಜಾಕ್ಷಿ ಕೆ. ಶ್ರೀಪತಿ ಭಟ್ ಬಯಲುರಂಗ ಮಂದಿರ, ವಿವೇಕಾನಂದ ನಗರ, ಪುತ್ತಿಗೆ ಮೂಡುಬಿದಿರೆ, ದಕ್ಷಿಣ ಕನ್ನಡ ಇಲ್ಲಿ ನಡೆಯಲಿದೆ.

ಉದ್ಘಾಟನಾ ಸಮಾರಂಭ ಡಿ.14 ಗುರುವಾರ ಸಂಜೆ 5:30ಕ್ಕೆ ಗೌರವಾನ್ವಿತ ರಾಜ್ಯಪಾಲರಿಗೆ ಗೌರವ ರಕ್ಷೆ ನಡೆಯಲಿದೆ. ಸಂಜೆ 5:45 -6:30 ಕ್ಕೆ ಸಭಾಕಾರ್ಯಕ್ರಮದ ಉದ್ಘಾಟನೆಯನ್ನು ಕರ್ನಾಟಕ ಸರಕಾರ ರಾಜ್ಯಪಾಲ ಗೌರವಾನ್ವಿತ ಡಾ. ಥಾವರ್‍ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ. ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ, ರಾಜರ್ಷಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಮೂಲ್ಕಿ- ಮೂಡಬಿದಿರೆ ವಿಧಾನಸಭಾ ಕ್ಷೇತ್ರ ಶಾಸಕ ಉಮಾನಾಥ ಎ. ಕೋಟ್ಯಾನ್, ದಕ್ಷಿಣ ಕನ್ನಡ ಜಿಲ್ಲೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಮ್.ಪಿ., ಕರ್ನಾಟಕ ಸರ್ಕಾರ ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ,ಕರ್ನಾಟಕ ಭಾರತ್ ಸ್ಕೌಟ್ಸ್ ಗೈಡ್ಸ್ ರಾಜ್ಯ ಆಯುಕ್ತಕ ಪಿ.ಜಿ.ಆರ್‍. ಸಿಂದ್ಯ, ಬೆಂಗಳೂರು,ಕರ್ನಾಟಕ ಚಿತ್ರಕಲಾ ಪರಿಷತ್ ಅಧ್ಯಕ್ಷ ಡಾ. ಬಿ.ಎಲ್.ಶಂಕರ್‍, ಉಡುಪಿ ಜಿ. ಶಂಕರ್‍ ಫ್ಯಾಮಿಲಿ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ. ಜಿ. ಶಂಕರ್‍, ಎಸ್,ಸಿ,ಡಿ,ಸಿ,ಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರಕುಮಾರ್‍ ,ಮಂಗಳೂರು ಎಂಆರ್‌ಜಿ ಗ್ರೂಪ್ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಅದಾನಿ ಗ್ರೂಪ್ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್‍ ಆಳ್ವ, ಬರೋಡ ಉದ್ಯಮಿ ಶಶಿಧರ ಶೆಟ್ಟಿ, ಬೆಂಗಳೂರು ಉದ್ಯಮಿ ಪ್ರಸನ್ನ ಶೆಟ್ಟಿ, ಮಂಗಳೂರು ಗಣಿ ಉದ್ಯಮಿ ರವೀಂದ್ರನಾಥ ಆಳ್ವ, ಬಂಟ್ವಾಳ ಬಡಜಗುತ್ತು , ರವಿಶಂಕರ್‍ ಶೆಟ್ಟಿ, ಮೂಡಬಿದಿರೆ ಜಯಶ್ರೀ ಅಮರನಾಥ ಶೆಟ್ಟಿ, ಮೂಡಬಿದಿರೆ ಉದ್ಯಮಿ ಕೆ. ಶ್ರೀಪತಿ ಭಟ್, ಪುತ್ತಿಗರ ಗ್ರಾಮ ಪಂಚಾಯತ್ ಅಧ್ಯಕ್ಷ ರಾಧ, ಮಂಗಳೂರು ಭಾರತ್ ಕನ್ಸ್‌ಸ್ಟ್ರಕ್ಷನ್ಸ್ ಮುಸ್ತಾಫಾ ಎಸ್.ಎಂ, ಮೂಡಬಿದಿರೆ ಭಿಮಲ್ ಕನ್ಸ್‌ಸ್ಟ್ರಕ್ಷನ್ಸ್ ಪ್ರವೀಣ್ ಕುಮಾರ್‍ ಗೌರವ ಉಪಸ್ಥಿತರಿರುವರು.

LEAVE A REPLY

Please enter your comment!
Please enter your name here