ಮಂಗಳೂರು: ಕ್ಯಾಪ್ಟನ್ ಬ್ರಿಜೇಶ್ ಚೌಟರ ಸಾರಥ್ಯದಲ್ಲಿ ಇದೇ ಬರುವ ಡಿಸೆಂಬರ್ 30 ರಂದು ನಡೆಯುವ ಮಂಗಳೂರು ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆಯು ಇಂದು ಬೆಳಿಗ್ಗೆ ಶರವು ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ನಡೆಯಿತು.



ಈ ಸಂಧರ್ಭದಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುಜಿತ್ ಪ್ರತಾಪ್ ಮಂಗಲ್ಪಾಡಿ, ಸಂಚಾಲಕರಾದ ಸಚಿನ್ ಶೆಟ್ಟಿ ಸಾಂತ್ಯಗುತ್ತು, ಕೋಶಾಧಿಕಾರಿ ತಲಪಾಡಿ ದೊಡ್ಡಮನೆ ಪ್ರೀತಮ್ ರೈ, ಉಪ್ಪಾಧ್ಯಕ್ಷರಾದ ಈಶ್ವರ್ ಪ್ರಸಾದ್ ಶೆಟ್ಟಿ, ಅಭಿಷೇಕ್ ರೈ ಕುಲಾಲು , ಕಾರ್ಯದರ್ಶಿಗಳಾದ ಹರ್ಷಿತ್ ಗೌಡ ಸಂಪ್ಯಾಡಿ, ಸಾಕ್ಷಾತ್ ಶೆಟ್ಟಿ ಕಾವೂರು, ಸದಸ್ಯರಾದ ಭರತ್ ಪಚ್ಚಿನಡ್ಕ ಉಪಸ್ಥಿತರಿದ್ದರು.

