ಮಂಗಳೂರು: ಕರ್ನಾಟಕ ಜಾನಪದ ಪರಿಷತ್ತು ಬೆಂಗಳೂರು, ರಾಮನಗರ ಜಾನಪದ ಲೋಕದಲ್ಲಿ ನಡೆಯುತ್ತಿರುವ ಜಾನಪದ ಲೋಕೋತ್ಸವ ಕಾರ್ಯಕ್ರಮ ದಲ್ಲಿ ಮಾರ್ಚ್ 1..2..3ರಂದು ಕರ್ನಾಟಕ ಜಾನಪದ ಪರಿಷತ್ತು ದಕ್ಷಿಣ ಕನ್ನಡ ಜಿಲ್ಲಾ ಘಟಕ ಆಶ್ರಯದಲ್ಲಿ ಮಂಗಳೂರಿನ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ಜಾನಪದ ಕಡಲೋತ್ಸವದ ಪೋಸ್ಟರ್ ಬಿಡುಗಡೆಯನ್ನು ಜಾನಪದ ಪರಿಷತ್ತಿನ ಮಹಾ ಪೋಷಕರು ಆಗಿರುವ ಪರಮಪೂಜ್ಯ ನಿರ್ಮಲಾನಂದನಾಥ ಸ್ವಾಮೀಜಿ ಯವರು, ಸಂಗೀತ ನಾದಬ್ರಹ್ಮ ಡಾ. ಹಂಸಲೇಖರವರು ಹಾಗೂ ನಿವೃತ್ತ ಲೋಕಾಯುಕ್ತರಾದ ಸಂತೋಷ್ ಹೆಗ್ಡೆಯವರು ಲೋಕಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಶುಭ ಕೋರಿದರು.



ಅಧ್ಯಕ್ಷ ಪಮ್ಮಿ ಕೊಡಿಯಾಲ್ ಬೈಲ್, ಸಂಚಾಲಕರಾದ ರಾಜೇಶ್ ಆಳ್ವ, ಕಾರ್ಯದರ್ಶಿ ರಾಜೇಶ್ ಸ್ಕೈಲಾರ್ಕ್ ಉಪಸ್ಥಿತರಿದ್ದರು.
