Home ಕರಾವಳಿ ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ನಟ ದರ್ಶನ್ ಭೇಟಿ

ಮಂಗಳೂರು: ಕುತ್ತಾರು ಕೊರಗಜ್ಜನ ಕ್ಷೇತ್ರಕ್ಕೆ ಸ್ಯಾಂಡಲ್ ವುಡ್ ನಟ ದರ್ಶನ್ ಭೇಟಿ

0

ಮಂಗಳೂರು : ಕೊರಗಜ್ಜ ದೈವದ ಆದಿಸ್ಥಳ ಕುತ್ತಾರು ಕ್ಷೇತ್ರಕ್ಕೆ ಭೇಟಿ‌ ನೀಡಿದ ಸ್ಯಾಂಡಲ್ ವುಡ್ ನಟ ದರ್ಶನ್ ಕೊರಗಜ್ಜ ದೈವದ ದರ್ಶನ ಪಡೆದರು. ಈ ವೇಳೆ ಕುತ್ತಾರು ಕೊರಗಜ್ಜನ ಕ್ಷೇತ್ರದ ವತಿಯಿಂದ ನಟ ದರ್ಶನ್ ಗೆ ಗೌರವ ಸಲ್ಲಿಕೆ ನಡೆಯಿತು.

ಬಳಿಕ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ನಾನು ಕುತ್ತಾರು ಕೊರಗಜ್ಜನ ಸನ್ನಿಧಿಗೆ ಭೇಟಿ ನೀಡಿದ್ದೇನೆ. ಈ ಹಿಂದೆ ನಾನು ಮಂಗಳೂರಿಗೆ ಬಹಳ ಸಲ ಬಂದಿದ್ದೆ. ಆದರೆ ಇಲ್ಲಿಗೆ ಭೇಟಿ ನೀಡಿರಲಿಲ್ಲ. ಆದ್ದರಿಂದ ಈ ಕ್ಷೇತ್ರವನ್ನೊಮ್ಮೆ ನೋಡಿಕೊಂಡು ಹೋಗೋಣ ಎಂದು ಬಂದಿದ್ದೇನೆ. ಸಂಸದೆ ಸುಮಲತಾ ಬೆಂಬಲ ವಿಚಾರದ ಬಗ್ಗೆ ಮಾತನಾಡಿದ ದರ್ಶನ್, ಅಮ್ಮ ಅಮ್ಮನೇ. ನಾವು ಅವಳೊಂದಿಗೆನೇ‌ ಇರೋದು. ಬೇರೆಯವರಿಗಾಗಿ ಅಮ್ಮನನ್ನು ಬಿಡೋಕಾಗುತ್ತಾ? ಎಂದು ಪರೋಕ್ಷವಾಗಿ ಸಂಸದೆ ಸುಮಲತಾ ಬೆಂಬಲಿಸುವ ಹೇಳಿಕೆ ನೀಡಿದರು.

LEAVE A REPLY

Please enter your comment!
Please enter your name here