Home ತಾಜಾ ಸುದ್ದಿ ಅಂಜಲಿ ಹತ್ಯೆ ಪ್ರಕರಣ : ‘CID’ ಅಧಿಕಾರಿಗಳ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟ ಆರೋಪಿ ಗಿರೀಶ್

ಅಂಜಲಿ ಹತ್ಯೆ ಪ್ರಕರಣ : ‘CID’ ಅಧಿಕಾರಿಗಳ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟ ಆರೋಪಿ ಗಿರೀಶ್

0

ಹುಬ್ಬಳ್ಳಿ : ರೈಲಿನಿಂದ ಜಿಗಿದು ಗಾಯಗೊಂಡು ಕಿಮ್ಸ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅಂಜಲಿ ಅಂಬಿಗೇರ ಕೊಲೆ ಆರೋಪಿ ವಿಶ್ವ ಅಲಿಯಾಸ್​ ಗಿರೀಶ್​ ಇದೀಗ CID ಅಧಿಕಾರಿಗಳ ಮುಂದೆ ಕೊಲೆಯ ರಹಸ್ಯವನ್ನು ಬಿಚ್ಚಿಟ್ಟಿದ್ದಾನೆ.

ಹೌದು ಪ್ರಕರಣವನ್ನು CID ಗೆ ವಹಿಸಲಾಗುವುದು ಎಂದು ಎರಡು ದಿನಗಳ ಹಿಂದೆ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದರು.

ಇದೀಗ ಸಿಐಡಿ ಅಧಿಕಾರಗಳ ಮುಂದೆ ಕೊಲೆಯ ಕುರಿತು ಹೇಳಿರುವ ಗಿರೀಶ್, ಮೈಸೂರಿಗೆ ಬರಲು ಯುವತಿ ಅಂಜಲಿ ಒಪ್ಪದಿದ್ದಕ್ಕೆ ಕೊಲೆಯ ಹಿಂದಿನ ದಿನ ಯುವತಿಗೆ ಒಂದು ಸಾವಿರ ಕಳುಹಿಸಿದ್ದ.

ಫೋನ್ ಪೇ ಮೂಲಕ ಆರೋಪಿ ವಿಶ್ವ 1000 ರೂಪಾಯಿ ಕಳುಹಿಸಿದ್ದ. 1000 ಹಣ ಪಡೆದು ಅಂಜಲಿ ನಂಬರ್ ಬ್ಲಾಕ್ ಮಾಡಿದ್ದಳು.ಈ ಒಂದು ಕಾರಣಕ್ಕೆ ಸಿಟ್ಟು ಬಂದು ಕೊಲೆ ಮಾಡಿದ್ದಾಗಿ ಹೇಳಿಕೆ ನೀಡಿದ್ದಾನೆ. ಸಿಐಡಿ ಅಧಿಕಾರಿಗಳ ಬಳಿ ಆರೋಪಿ ವಿಶ್ವ ಕೊಲೆಯ ರಹಸ್ಯ ಬಾಯಿ ಬಿಟ್ಟಿದ್ದಾನೆ. ಕಿಮ್ಸ್ ಆಸ್ಪತ್ರೆಯಲ್ಲಿ ಸಿಐಡಿ ಅಧಿಕಾರಿಗಳು ಆರೋಪಿ ಗಿರೀಶ್ ನನ್ನ ವಿಚಾರಣೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here