ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ದ ಅವಹೇಳನಕಾರಿ ಸಂದೇಶ ರವಾನಿಸಿರುವ ದೂರಿನ ಹಿನ್ನೆಲೆಯಲ್ಲಿ ಆರೋಪಿ ಪ್ರಜ್ವಲ್ ರೈ ವಿರುದ್ಧ ಪ್ರಕರಣ ದಾಖಲಾಗಿದೆ.



ಮೇ 17ರಂದು ವಾಟ್ಸಾಪ್ ಗ್ರೂಪ್ ವೊಂದರಲ್ಲಿ ಆರೋಪಿಯು ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ಕೀಳು ಮಟ್ಟದ ಪದಗಳನ್ನು ಬಳಸಿ ತೇಜೋವಧೆ ಮಾಡಿದಲ್ಲದೇ ಜೀವ ಬೆದರಿಕೆ ಒಡ್ಡಿರುವ ಬಗ್ಗೆ ಬಿಜೆಪಿ ನಿಯೋಗ ನಗರ ಠಾಣೆಗೆ ತೆರಳಿ ದೂರು ನೀಡಿತ್ತು. ಆರೋಪಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿತ್ತು. ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
