Home ಕರಾವಳಿ ಬಂಟ್ವಾಳ: ಕಿಟಕಿ ಸರಳಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

ಬಂಟ್ವಾಳ: ಕಿಟಕಿ ಸರಳಿಗೆ ನೇಣು ಬಿಗಿದು ಯುವಕ ಆತ್ಮಹತ್ಯೆ

0

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ನರಿಕೊಂಬು ಎಂಬಲ್ಲಿ ನಡೆದಿದೆ. ಬಂಟ್ವಾಳ ನಿವಾಸಿ ಶೇಖರ ಪೂಜಾರಿ ಅವರ ಎರಡನೇ ಮಗ ರಮೇಶ್ (22) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ.

ರಮೇಶ್ ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆದರೆ ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ಈವರೆಗೆ ತಿಳಿದುಬಂದಿಲ್ಲ.

ಅತ್ಯಂತ ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ರಮೇಶ್ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಅಣ್ಣ ಕೂಡ ಕಳೆದ ವರ್ಷ ಇವರ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ.

ಶೇಖರ ಪೂಜಾರಿ ಅವರಿಗೆ ಇಬ್ಬರು ಗಂಡು ಮಕ್ಕಳು, ಇದೀಗ ಇಬ್ಬರು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ಘಟನಾ ಸ್ಥಳಕ್ಕೆ ನರಿಕೊಂಬು ಗ್ರಾ.ಪಂ.ಅಧ್ಯಕ್ಷ ಸಂತೋಷ್ ಕುಮಾರ್ ಹಾಗೂ ಊರಿನ ಅನೇಕರು ಬೇಟಿ ನೀಡಿದ್ದಾರೆ. ಬಂಟ್ವಾಳ ನಗರ ಠಾಣಾ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here