Home ಕರಾವಳಿ ಎರಡು ವರ್ಷಗಳ ಹಿಂದಿನ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು

ಎರಡು ವರ್ಷಗಳ ಹಿಂದಿನ ಕಳವು ಪ್ರಕರಣ ಭೇದಿಸಿದ ಬೆಳ್ಳಾರೆ ಪೊಲೀಸರು

0

ಬೆಳ್ಳಾರೆ : ಎರಡು ವರ್ಷಗಳ ಹಿಂದೆ ನಡೆದ ಮನೆ ಕಳ್ಳತನ ಪ್ರಕರಣವನ್ನು ಬೆಳ್ಳಾರೆ ಪೊಲೀಸರು ಭೇದಿಸಿದ್ದಾರೆ. ಪೊಲೀಸ್ ಠಾಣಾ ವ್ಯಾಪ್ತಿಯ ಕಡಬ ತಾಲೂಕು ಎಡಮಂಗಲ ಗ್ರಾಮದ ದಡ್ಡು ಎಂಬಲ್ಲಿ ನಡೆದ ಸುಮಾರು 1,48,000 ರೂ. ಮೌಲ್ಯದ ಚಿನ್ನಾಭರಣಗಳು ಮತ್ತು ನಗದು ಹಣ 30,000 ರೂ. ಸೇರಿ ಒಟ್ಟು 1,78,000 ರೂ. ಮೌಲ್ಯದ ಮನೆಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಠಾಣೆಯಲ್ಲಿ ಅಪರಾಧ ಕ್ರಮಾಂಕ. 22/2022 ಕಲಂ 457,380 ಭಾ. ದಂ. ಸಂ ರಂತೆ ಪ್ರಕರಣ ದಾಖಲಿಸಿಕೊಂಡು, ಕಳೆದ ಎರಡು ವರ್ಷಗಳಿಂದ ತನಿಖೆ ನಡೆಸಿದ್ದು, ಪ್ರಸ್ತುತ ಪ್ರಕರಣದ ಆರೋಪಿ ಬೆಳ್ತಂಗಡಿ ನೆರಿಯಾ ನಿವಾಸಿ ಶರತ್ (24) ಎಂಬಾತನನ್ನು ವಶಕ್ಕೆ ಪಡೆಯಲಾಗಿದ್ದು, ಕಳವು ಮಾಡಿದ ಸೊತ್ತುಗಳನ್ನು ಪತ್ತೆ ಮಾಡಿ ಸ್ವಾದೀನಪಡಿಸಿಕೊಳ್ಳಲಾಗಿದೆ.

ಸದ್ರಿ ಪ್ರಕರಣದ ಪತ್ತೆ ಕಾರ್ಯದಲ್ಲಿ ಜಿಲ್ಲಾ ಪೊಲೀಸ್ ಅಧಿಕ್ಷಕರಾದ ಸಿ ಬಿ ರಿಷ್ಯಂತ್ ಐಪಿಎಸ್ ರವರು, ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಜಗದೀಶ್ ಎಂ ಕೆ.ಎಸ್.ಪಿ.ಎಸ್ ಮತ್ತು ರಾಜೇಂದ್ರ ಕೆ.ಎಸ್.ಪಿ.ಎಸ್ ರವರ ಮಾರ್ಗದರ್ಶನದಲ್ಲಿ ವಿಜಯ ಪ್ರಸಾದ್, ಪ್ರಭಾರ ಪೊಲೀಸ್ ಉಪಾಧೀಕ್ಷಕರು, ಪುತ್ತೂರು ಉಪವಿಭಾಗ ಮತ್ತು ಸುಳ್ಯ ವೃತ್ತ ನಿರೀಕ್ಷಕರಾದ ಸತ್ಯನಾರಾಯಣ ಕೆ ರವರ ನೇತೃತ್ವದಲ್ಲಿ, ಸಂತೋಷ್ ಬಿ ಪಿ ಪೊಲೀಸ್ ಉಪನಿರೀಕ್ಷಕರು, ಬೆಳ್ಳಾರೆ ಪೊಲೀಸ್ ಠಾಣೆ ಹಾಗೂ ಬೆಳ್ಳಾರೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ನವೀನ ಕೆ. ಚಂದ್ರಶೇಖರ್ ಗೌಡ, ಸಂತೋಷ್ ಜಿ. ಜೀಪು ಚಾಲಕ ಪುರಂದರ ಹಾಗೂ ಬೆರಳುಮುದ್ರೆ ಘಟಕದ ಪ್ರಶಾಂತ್ ಹೊಸಮನಿ ಮತ್ತು ಸಚಿನ್ ಬಿ. ಬಿ ರವರನ್ನೊಳಗೊಂಡು ವಿಶೇಷ ತನಿಖಾ ತಂಡವು ಕರ್ತವ್ಯ ನಿರ್ವಹಿಸಿರುತ್ತದೆ.

ಸದ್ರಿ ತನಿಖಾ ತಂಡಕ್ಕೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಂದ ಮತ್ತು ಸಾರ್ವಜನಿಕ ವಲಯದಲ್ಲಿ ಪ್ರಶಂಸೆಯನ್ನು ವ್ಯಕ್ತವಾಗಿದೆ.

LEAVE A REPLY

Please enter your comment!
Please enter your name here