Home ತಾಜಾ ಸುದ್ದಿ ವಾಲ್ಮಿಕಿ ನಿಗಮ ಹಗರಣ ಕೇಸ್ : ಮಾಜಿ ಸಚಿವ ಬಿ.ನಾಗೇಂದ್ರ ʻEDʼ ವಶಕ್ಕೆ

ವಾಲ್ಮಿಕಿ ನಿಗಮ ಹಗರಣ ಕೇಸ್ : ಮಾಜಿ ಸಚಿವ ಬಿ.ನಾಗೇಂದ್ರ ʻEDʼ ವಶಕ್ಕೆ

0

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ.ನಾಗೇಂದ್ರರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಕೋಟ್ಯಾಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದು, ಹೆಚ್ಚಿನ ವಿಚಾರಣೆ ನಡೆಸಲಿದ್ದಾರೆ.

 

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಮಾಜಿ ಸಚಿವ ಬಿ.ನಾಗೇಂದ್ರ ಅವರ ನಿವಾಸ, ಆಪ್ತರ ಮನೆಗಳ ಮೇಲೆ ನಿನ್ನೆ ದಾಳಿ ನಡೆಸಿದ್ದಾರೆ. ನಾಗೇಂದ್ರ ಅವರ ಮನೆಯಲ್ಲಿ ಆಸ್ತಿ ಪತ್ರಗಳು ದೊರೆತಿದ್ದು, ಅವುಗಳನ್ನು ಹಗರಣದಲ್ಲಿ ಬಂದ ಹಣದಿಂದಲೇ ಖರೀದಿಸಲಾಗಿದ್ಯಾ ಅನ್ನೋ ಬಗ್ಗೆ ತನಿಖೆಯನ್ನು ಇಡಿ ಅಧಿಕಾರಿಗಳು ನಡೆಸುತ್ತಿದ್ದಾರೆ.

ಇದರ ನಡುವೆ ಮಾಜಿ ಸಚಿವ ಬಿ.ನಾಗೇಂದ್ರ ಅವರ ಪಿಎ ಹರೀಶ್ ಅವರ ವೀಡಿಯೋ ಆಧಾರಿತ ಹೇಳಿಕೆಯನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಪಿಎ ಹರೀಶ್ ನೀಡಿದಂತ ಹೇಳಿಕೆಯ ಆಧಾರದ ಮೇಲೆ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಇಂದು ಬಂಧಿಸಿದ್ದಾರೆ ಎನ್ನಲಾಗಿದೆ

LEAVE A REPLY

Please enter your comment!
Please enter your name here