Home ತಾಜಾ ಸುದ್ದಿ ಮಲೆನಾಡಿನ ಬಹುಕಾಲದ ಬೇಡಿಕೆಗೆ ಪುರಸ್ಕಾರ : `ಕಸ್ತೂರಿ ರಂಗನ್ ವರದಿ’ ತಿರಸ್ಕಾರ

ಮಲೆನಾಡಿನ ಬಹುಕಾಲದ ಬೇಡಿಕೆಗೆ ಪುರಸ್ಕಾರ : `ಕಸ್ತೂರಿ ರಂಗನ್ ವರದಿ’ ತಿರಸ್ಕಾರ

0

ಬೆಂಗಳೂರು : ಮಲೆನಾಡಿಗರ ಬಹುಕಾಲದ ಬೇಡಿಕೆಯನ್ನು ಪುರಸ್ಕರಿಸಲಾಗಿದ್ದು,.ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ನಿರ್ಧರಿಸಲಾಗಿದೆ.

ಪಶ್ಚಿಮ ಘಟ್ಟ ವಲಯವನ್ನು ಪರಿಸರ ಸೂಕ್ಷ್ಮ ಪ್ರದೇಶವಾಗಿ ಘೋಷಣೆ ಮಾಡಿದಲ್ಲಿ ಅರಣ್ಯದಂಚಿನಲ್ಲಿ ವಾಸಿಸುತ್ತಿರುವ ಸಾವಿರಾರು ಕುಟುಂಬಗಳು ಒಕ್ಕಲೇಳಬೇಕಾದ ಸ್ಥಿತಿ ನಿರ್ಮಾಣವಾಗುತ್ತಿತ್ತು.

ಮಲೆನಾಡಿಗರ ಈ ಆತಂಕವನ್ನು ನಿವಾರಿಸುವ ಉದ್ದೇಶದೊಂದಿಗೆ ಡಾ. ಕಸ್ತೂರಿ ರಂಗನ್‌ ವರದಿಯನ್ನು ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಸಂಪೂರ್ಣವಾಗಿ ತಿರಸ್ಕರಿಸಿದೆ.

LEAVE A REPLY

Please enter your comment!
Please enter your name here