ಪುತ್ತೂರು: ನಿನ್ನೆ ತಾನೇ ಬಿಜೆಪಿ ಪಕ್ಷವು ವಿಧಾನ ಪರಿಷತ್ ಚುನಾವಣೆಗೆ ಅಚ್ಚರಿಯ ರೀತಿಯಲ್ಲಿ ಸಂಘ ಪರಿವಾರದ ಕಟ್ಟಾಳು ಜಿಲ್ಲಾ ಬಿಜೆಪಿಯ ಪ್ರಧಾನ ಕಾರ್ಯದರ್ಶಿಯಾದ ಕಿಶೋರ್ ಕುಮಾರ್ ಬೊಟ್ಯಾಡಿ ಅವರಿಗೆ ಟಿಕೆಟ್ ನೀಡಿದ್ದು ಇಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.



ಈ ಸಂಧರ್ಭದಲ್ಲಿ ನಗರ ಮಂಡಲ ಅಧ್ಯಕ್ಷರಾದ ಶಿವ ಕುಮಾರ್, ಮಾಜಿ ಶಾಸಕರಾದ ಸಂಜೀವ ಮಠಂದೂರು, ಜಿಲ್ಲಾ ಉಪಾಧ್ಯಕ್ಷರಾದ ಪ್ರಸನ್ನ ಮಾರ್ತ, ನಗರ ಸಭೆಯ ಉಪಾಧ್ಯಕ್ಷರಾದ ಬಾಲಚಂದ್ರ,ಯುವ ಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ಕಲ್ಲೇಗ ಜೊತೆಗಿದ್ದರು.
