ಬೆಂಗಳೂರು : ಕಳೆದ ಮಾರ್ಚ್ 1ರಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇತ್ತೀಚಿಗೆ ಎನ್ಐಎ ಚಾರ್ಜ್ ಶೀಟ್ ಸಲ್ಲಿಸಿದೆ. ಇದೀಗ ಚಾರ್ಜ್ ಶೀಟ್ ನಲ್ಲಿ ಮತ್ತೊಂದು ಸ್ಫೋಟಕ ವಿಷಯ ಬಹಿರಂಗವಾಗಿದ್ದು, ಆರೋಪಿಗಳು ಬಾಂಬ್ ತಯಾರಿಕೆಯ ಕುರಿತು ಐಸಿಸ್ ನಿಂದ ಆನ್ಲೈನ್ ನಲ್ಲಿಯೇ ತರಬೇತಿ ಪಡೆದಿದ್ದರು ಎಂದು ತಿಳಿದುಬಂದಿದೆ.



ಪ್ರಕರಣದ ಆರೋಪಿಗಳಾದ ಅಬ್ದುಲ್ ಮತೀನ್ ತಾಹ, ಮುಸಾವೀರ್ ಹುಸೇನ್, ಶಾರಿಕ್, ಅರಾಫತ್ ಅಲಿ, ಮಾಜ್ ಮುನೀರ್ ಹಾಗೂ ಮುಜಾಮಿಲ್ ಷರೀಫ್ ಐಸಿಸ್ ಜೊತೆ ನಂಟು ಇಟ್ಟುಕೊಂಡಿದ್ದರು. ಇವರ ಪೈಕಿ ನಾಲ್ವರಿಗೆ ಐಸಿಸ್ ಬಾಂಬ್ ತಯಾರಿಕೆಯ ತರಬೇತಿ ನೀಡಿದೆ. ಅಬ್ದುಲ್ ಮತೀನ್ ತಾಹ, ಮುಸಾವೀರ್, ಶಾರಿಕ್ ಹಾಗೂ ಮಾಜ್ ಮುನೀರ್ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದಾರೆ. ಆನ್ಲೈನ್ ಮೂಲಕ ಐಸಿಸ್ನಿಂದ ತರಬೇತಿ ಪಡೆದಿದ್ದಾರೆ. ಕೇವಲ ಒಂದು ವಾರದಲ್ಲೇ ಸಂಪೂರ್ಣ ತರಬೇತಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಬಾಂಬ್ ಎಲ್ಲಿ ಇಡಬೇಕು ಅಂತ ಫ್ಲಾನ್ ಫೈನಲ್ ಆದ ಮೇಲೆ, ಬಾಂಬ್ ತಯಾರಿಕೆಗೆ ಮುಂದಾಗುತ್ತಿದ್ದರು. ಈ ನಾಲ್ವರು ತಯಾರು ಮಾಡುವ ಬಾಂಬ್ಗಳಿಗೆ 90 ನಿಮಿಷಗಳ ಟ್ರೈಮರ್ ಇಡುತ್ತಿದ್ದರು. ಮಂಗಳೂರು, ಬಿಜೆಪಿ ಕಚೇರಿ ಹಾಗೂ ರಾಮೇಶ್ವರಂ ಕೆಫೆ ಈ ಮೂರು ಕಡೆಗಳಲ್ಲಿ 90 ನಿಮಿಷ ಸೆಟ್ ಮಾಡಿದ್ದರು. ಆದರೆ, ಎರಡು ಕಡೆ ಇಟ್ಟಿದ್ದ ಬಾಂಬ್ ಫೇಲ್ ಆಗಿದ್ದು, ರಾಮೇಶ್ವರಂ ಕೆಫೆ ಮಾತ್ರ ಸಕ್ಸಸ್ ಆಗಿತ್ತು.
ಬಾಂಬ್ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುಗಳನ್ನು ಆನ್ಲೈನ್ ಮೂಲಕ ಖರೀದಿಸಿ, ಒಂದು ವಾರದಲ್ಲಿ ಬಾಂಬ್ ತಯಾರಿಸಿದ್ದರು. ಮಂಗಳೂರು ಕುಕ್ಕರ್ ಬಾಂಬ್, ಬಿಜೆಪಿ ಕಚೇರಿ ಬಳಿ ಇಟ್ಟಿದ್ದ ಬಾಂಬ್, ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದ ಬಾಂಬ್ಗಳನ್ನು ಕೇವಲ ಒಂದು ವಾರದಲ್ಲಿ ತಯಾರಾಸಿದ್ದರು ಎಂದು ದೋಷಾರೋಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ