Home ಕರಾವಳಿ ವಿಟ್ಲ: ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

ವಿಟ್ಲ: ಹಾಡಹಗಲೇ ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಕಳ್ಳರು

0

ವಿಟ್ಲ :ಮನೆಯ ಹಿಂಬದಿ ಬಾಗಿಲು ಮುರಿದು ಕಳ್ಳರು ಮನೆಯ ಕಪಾಟಿನಲ್ಲಿದ್ದ ಲಕ್ಷಾಂತರ ಮೌಲ್ಯದ ಚಿನ್ನ ದೋಚಿದ ಘಟನೆ ವಿಟ್ಲದ ಮಂಕುಡೆ ಎಂಬಲ್ಲಿ ಮಂಗಳವಾರ ಹಗಲು ಹೊತ್ತಿನಲ್ಲಿ ನಡೆದಿದೆ.

ವಿಟ್ಲದ ಮಂಕುಡೆ ಕಲ್ಕಾಜೆ ನಿವಾಸಿ ಗಣೇಶ್‌ ಶೆಟ್ಟಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಗಣೇಶ್ ಶೆಟ್ಟಿ ಯವರ ಪತ್ನಿ ಪೇಟೆಗೆ ಹೋಗಿದ್ದ ಸಂದರ್ಭ ಕಳ್ಳರು ಹಿಂಬದಿ ಬಾಗಿಲನ್ನು ಮುರಿದು ಮನೆಯ ಒಳಗೆ ನುಗ್ಗಿದ್ದಾರೆ.

ಮನೆಯೊಳಗೆ ನುಗ್ಗಿದ ಕಳ್ಳರು ಕೋಣೆಯೊಳಗಿದ್ದ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here