Home ಕರಾವಳಿ ಮಂಗಳೂರು: ಕಾರ್ಮಿಕ ವಿಮಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ

ಮಂಗಳೂರು: ಕಾರ್ಮಿಕ ವಿಮಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ

0

ಮಂಗಳೂರು: ಡಯಾಲಿಸಿಸ್‌ ಮಾಡಲು ಆಗಮಿಸುವ ರೋಗಿಗಳಿಗೆ ಮಂಗಳೂರಿನ ರಾಜ್ಯ ವಿಮಾ ಆಸ್ಪತ್ರೆ (ಇಎಸ್‌ಐ)ಯಲ್ಲಿ ಪರದಾಡುವ ಪರಿಸ್ಥಿತಿ ಎದುರಾಗಿದೆ ಎಂದು ಕೆಲವು ರೋಗಿಗಳು ಆರೋಪಿಸಿದ್ದಾರೆ.

ಪರಿಸ್ಥಿತಿಯ ಗಂಭೀರತೆ ಅರಿತ ಸಂಸದ ಕ್ಯಾ| ಬ್ರಿಜೇಶ್‌ ಚೌಟ ಅವರು ಬುಧವಾರ ಸಂಜೆ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.ಹಲವು ದಿನಗಳಿಂದ ಇಲ್ಲಿಗೆ ಬರುವ ರೋಗಿಗಳಿಗೆ “ಸರ್ವರ್‌ ದೋಷವಿದೆ’ ಎಂದು ಹೇಳಿ, ದೂರದ ಊರುಗಳಿಂದ ಬರುವ ರೋಗಿಗಳನ್ನು ಸತಾಯಿಸಲಾಗುತ್ತಿದೆ ಎಂದು ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಸರ್ವರ್‌ ಸಮಸ್ಯೆ ಇದ್ದರೆ ಇತರ ಆಸ್ಪತ್ರೆಗಳಿಗೆ ನೀಡುವ ಪತ್ರಗಳನ್ನು ಅಂತರ್ಜಾಲದಲ್ಲಿ ಆಗದಿದ್ದರೆ ಕೈ ಬರಹ ಮೂಲಕ ನೀಡಬೇಕು. ಯಾವುದೇ ಕಾರಣಕ್ಕೂ ರೋಗಿಗಳಿಗೆ ತೊಂದರೆ ನೀಡಬಾರದು ಎಂದು ಸಂಸದರು ಈ ವೇಳೆ ಅಧಿಕಾರಿಗಳಿಗೆ ತಾಕೀತು ಮಾಡಿದರು.

LEAVE A REPLY

Please enter your comment!
Please enter your name here