Home ತಾಜಾ ಸುದ್ದಿ ಅನರ್ಹರ ಬಿಪಿಎಲ್ ಕಾರ್ಡು ರದ್ದು ಮಾಡುವಂತೆ ಮುಖ್ಯಮಂತ್ರಿ ಸೂಚನೆ..! 

ಅನರ್ಹರ ಬಿಪಿಎಲ್ ಕಾರ್ಡು ರದ್ದು ಮಾಡುವಂತೆ ಮುಖ್ಯಮಂತ್ರಿ ಸೂಚನೆ..! 

0

ಬೆಂಗಳೂರು: ಅನರ್ಹ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಿ, ಆದರೆ ಅರ್ಹ ಬಿಪಿಎಲ್ ಕಾರ್ಡುದಾರರ ಹೆಸರು ರದ್ದು ಮಾಡಬಾರದು ಎಂದು ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಗುರುವಾರ ಮುಖ್ಯಮಂತ್ರಿ ಅವರ ಅಧ್ಯಕ್ಷತೆಯಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಈ ಸೂಚನೆ ನೀಡಿದರು. ಕೇಂದ್ರ ಸರ್ಕಾರ ನಿಗದಿಪಡಿಸಿರುವ ಮಾನದಂಡಗಳನ್ನು ಪೂರೈಸದ, ಬಿಪಿಎಲ್‌ ಪಡಿತರ ಚೀಟಿ ಹೊಂದಿರುವ ಅನರ್ಹರನ್ನು ಗುರುತಿಸಿ ಹಂತ ಹಂತವಾಗಿ ತೆಗೆದು ಹಾಕಬೇಕು. ಆದರೆ ಒಬ್ಬನೇ ಒಬ್ಬ ಅರ್ಹ ಬಿಪಿಎಲ್‌ ಕಾರ್ಡುದಾರನ ಬಿಪಿಎಲ್‌ ಕಾರ್ಡ್‌ ರದ್ದು ಮಾಡಬಾರದು. ಅನರ್ಹ ಬಿಪಿಎಲ್‌ ಪಡಿತರ ಚೀಟಿದಾರರು ಸ್ವಯಂ ತಮ್ಮ ಬಿಪಿಎಲ್‌ ಕಾರ್ಡ್‌ಗಳನ್ನು ಹಿಂತಿರುಗಿಸಲು ಕಾಲಾವಕಾಶ ನೀಡಬೇಕು, ಆ ಬಳಿಕ ಅಂತವರಿಗೆ ನೋಟಿಸ್‌ ನೀಡಿ ಕಾರ್ಡುಗಳನ್ನು ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಹೇಳಿದರು.

ಈಗಾಗಲೇ 4ಸಾವಿರ ಸರ್ಕಾರಿ ನೌಕರರನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ. ಅನ್ನಭಾಗ್ಯ ಯೋಜನೆಯ ನೇರ ನಗದು ವರ್ಗಾವಣೆಯಡಿ ರೂ.4692 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅಕ್ಟೋಬರ್‌ ಅಂತ್ಯದವರೆಗೆ ರೂ. 3253 ಕೋಟಿ ವೆಚ್ಚ ಮಾಡಲಾಗಿದೆ. ಪಡಿತರ ಹಾಗೂ ಆಹಾರ ಧಾನ್ಯ ವಿತರಣಾ ವ್ಯವಸ್ಥೆಯನ್ನು ತಳಹಂತದಲ್ಲಿ ಬಲಪಡಿಸುವ ಮೂಲಕ ಜಾಗೃತಿ ಸಮಿತಿಗಳಲ್ಲಿ ಜನರ ಸಹಭಾಗಿತ್ವವನ್ನು ಹೆಚ್ಚಿಸಬೇಕು. ಸಮಿತಿ ನಿಯಮಿತವಾಗಿ ಸಭೆ ನಡೆಸುವುದನ್ನು ಖಾತ್ರಿಪಡಿಸಬೇಕು ಎಂದು ಸಿಎಂ ಸೂಚಿಸಿದರು.

LEAVE A REPLY

Please enter your comment!
Please enter your name here