
ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲೆ ಚಾಕುವಿನಿಂದ ದಾಳಿ ನಡೆಸಿದ ದುಷ್ಕರ್ಮಿಯನ್ನು ಘಟನೆ ನಡೆದ ಸುಮಾರು 30 ಗಂಟೆಗಳ ಬಳಿಕ ಮುಂಬೈ ಪೊಲೀಸರು ಬಂಧಿಸಿದ್ದಾರೆ.



ಸದ್ಯ ಬಾಂದ್ರಾ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆ ತಂದಿದ್ದಾರೆ. ಅಲ್ಲಿ ಆರೋಪಿಯನ್ನು ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ಆರೋಪಿಯು ದಾಳಿ ಮಾಡಿದರ ಹಿಂದಿನ ಉದ್ದೇಶವೇನು? ಆತ ಸೈಫ್ ಮನೆ ತಲುಪಿದ್ದು ಹೇಗೆ? ಈ ದಾಳಿ ಹಿಂದೆ ಬೇರೆ ಯಾರದ್ದಾದರೂ ಕೈವಾಡ ಇದೆಯೇ ಎಂಬ ಬಗ್ಗೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.


ಹಲ್ಲೆಗೊಳಗಾಗಿರುವ ಸೈಫ್ ಅಲಿ ಖಾನ್ ಅವರು ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ಚೇತರಿಸಿಕೊಳ್ಳುವ ಹಂತದಲ್ಲಿ ಇದ್ದಾರೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು, ಸೈಫ್ ಅಲಿ ಖಾನ್ ಮನೆಯಲ್ಲಿ ಸರಿಯಾದ ಭದ್ರತೆ ಇರಲಿಲ್ಲ ಎನ್ನಲಾಗಿದೆ. ಫ್ಲ್ಯಾಟ್ನ ಹೊರ ಭಾಗದಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಿಲ್ಲ. ಹೀಗಾಗಿ, ಬಿಲ್ಡಿಂಗ್ಗೆ ಯಾರು ಬರುತ್ತಾರೆ ಅಥವಾ ಹೋಗುತ್ತಾರೆ ಎಂದು ಹೇಳಲು ಸಾಧ್ಯ ಇರಲಿಲ್ಲ. ಇನ್ನು, ಯಾರು ಬರುತ್ತಾರೆ ಹೋಗುತ್ತಾರೆ ಎಂಬುದನ್ನು ಬರೆದಿಡಲು ಅಲ್ಲಿ ಯಾವುದೇ ರಿಜಿಸ್ಟರ್ ಬುಕ್ ಕೂಡ ಇರಲಿಲ್ಲ. ‘ಇದು ಸೈಫ್ ಸ್ಥಾನದಲ್ಲಿ ಇರುವ ಇತರ ಸೆಲೆಬ್ರಿಟಿಗಳಿಗೂ ವೇಕಪ್ ಕಾಲ್’ ಎಂದಿದ್ದಾರೆ.