Home ಉಡುಪಿ ಕೆ.ಕೃಷ್ಣಮೂರ್ತಿ ಅಭಿಮಾನಿ ಬಳಗ,ಯಶೋಧಾ ಆಟೋ ಯೂನಿಯನ್: ಜ.26 (ನಾಳೆ) ರಕ್ತದಾನ ಶಿಬಿರ

ಕೆ.ಕೃಷ್ಣಮೂರ್ತಿ ಅಭಿಮಾನಿ ಬಳಗ,ಯಶೋಧಾ ಆಟೋ ಯೂನಿಯನ್: ಜ.26 (ನಾಳೆ) ರಕ್ತದಾನ ಶಿಬಿರ

0

ಉಡುಪಿ, ಜ.25: ಯಶೋದಾ ಆಟೋ ಯೂನಿಯನ್, ಅಭಯಹಸ್ತ ಚಾರಿಟೆಬಲ್ ಟ್ರಸ್ಟ್ ಮಣಿಪಾಲ ಕೆಎಂಸಿ ರಕ್ಯನಿಧಿ ವಿಭಾಗ, ರೋಟರಿ ಬ್ಲಡ್ ಬ್ಯಾಂಕ್ ಶಿವಮೊಗ್ಗ, ಕೆ. ಕೃಷ್ಣಮೂರ್ತಿ ಅಭಿಮಾನಿ ಬಳಗದಿಂದ ಸಮಾಜ ಸೇವಕ ಕೆ. ಕೃಷ್ಣಮೂರ್ತಿ ಆಚಾರ್ಯ ಕಿನ್ನಿಮೂಲ್ಕಿ ಅವರ ಜನ್ಮದಿನದ ಪ್ರಯುಕ್ತ ಜ.26ರ (ನಾಳೆ) ಬೆಳಗ್ಗೆ 7 ರಿಂದ ಮಧ್ಯಾಹ್ನ 3.30ರ ತನಕ ಶ್ರೀಕೃಷ್ಣಮಠ ಪಾರ್ಕಿಂಗ್ ಏರಿಯಾದಲ್ಲಿರುವ ಮಥುರಾ ಕಂಫರ್ಟ್ನಲ್ಲಿ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

ಮಧ್ಯಾಹ್ನ 12ರಿಂದ ನಡೆಯಲಿರುವ ಸಭಾ ಕಾರ್ಯಕ್ರಮವನ್ನು ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟ್‌ನ ಪ್ರವರ್ತಕ ಡಾ| ಜಿ. ಶಂಕರ್ ಉದ್ಘಾಟಿಸಲಿದ್ದು, ಬಡಗಬೆಟ್ಟು ಕ್ರೆ. ಕೋ-ಆಪ್.ಸೊಸೈಟಿ ಅಧ್ಯಕ್ಷ ಬಿ. ಜಯಕರ ಶೆಟ್ಟಿ ಇಂದ್ರಾಳಿ ಅಧ್ಯಕ್ಷತೆ ವಹಿಸುವರು. ಜನಪ್ರತಿನಿಧಿಗಳು, ಉದ್ಯಮಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

LEAVE A REPLY

Please enter your comment!
Please enter your name here