ಮಂಗಳೂರು: ಸಂಘಪರಿವಾರದ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಎರಡು ಸ್ಥಳಗಳಲ್ಲಿ ಯುವಕರ ಮೇಲೆ ಚೂರಿ ಇರಿತ ನಡೆದಿದೆ. ಅಡ್ಯಾರ್ ಕಣ್ಣೂರು ಮತ್ತು ಉಳ್ಳಾಲದ ತೊಕ್ಕೋಟು ಒಳಪೇಟೆಯಲ್ಲಿ ಯುವಕರಿಗೆ ಚೂರಿ ಇರಿಯಲಾಗಿದೆ ಎಂಬ ಮಾಹಿತಿ ಲಭಿಸಿದೆ.



ಉಳ್ಳಾಲದ ತೆಕ್ಕೋಟು ಒಳಪೇಟೆಯಲ್ಲಿ ಫೈಝಲ್ ಎಂಬ ಯುವಕನಿಗೆ ಚೂರಿ ಇರಿಯಲಾಗಿದ್ದು, ಬೆನ್ನಿಗೆ ಗಾಯವಾಗಿದೆ. ಫೈಝಲ್ ಕೂಡಾ ತಪ್ಪಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.
