ಮಂಗಳೂರು: ಸೂಟರ್ ಪೇಟೆ ಪ್ರಜ್ವಲ್ ಯುವಕ ಮಂಡಲ (ರಿ) ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವ ಸಂಘಟನೆಯಾಗಿ ಕಳೆದ 27 ವರ್ಷಗಳಿಂದ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಗುರುತಿಸಿಕೊಂಡಿದೆ.



ಇದರ 27ನೇ ವಾರ್ಷಿಕೋತ್ಸವ ಹಾಗೂ ಸಾಧಕರಿಗೆ ಸನ್ಮಾನ, 300ಕ್ಕೂ ಹೆಚ್ಚು ಮಕ್ಕಳಿಗೆ ಪುಸ್ತಕ ವಿತರಣಾ ಸಮಾರಂಭ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದ ಶ್ರೀ ಬಬ್ಬುಸ್ವಾಮಿ ರಂಗಮಂದಿರದಲ್ಲಿ ನಡೆಯಿತು.

ಸಮಾರಂಭವನ್ನು ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ
ಕಾಮತ್ ಅವರು ಉದ್ಘಾಟಿಸಿ ಮಾತನಾಡಿದರು. “ಇಂದು ಶಿಕ್ಷಣಕ್ಕೆ ಬಹಳಷ್ಟು ಮಹತ್ವವಿದೆ. ಮಕ್ಕಳು ಗುಣಮಟ್ಟದ ಶಿಕ್ಷಣವನ್ನು ಪಡೆಯುವ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಮಾನವನ್ನು ಪಡೆಯಬಹುದು. ಈ ನಿಟ್ಟಿನಲ್ಲಿ ಪ್ರಜ್ವಲ್ ಯುವಕ ಮಂಡಲ ನಿರಂತರ 27 ವರ್ಷಗಳಿಂದ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡಿರುವುದು ಶ್ಲಾಘನೀಯ’ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ಪ್ರಜ್ವಲ್ ಯುವಕ ಮಂಡಲದ ಗೌರವಾಧ್ಯಕ್ಷರು, ನಿವೃತ್ತತಹಶೀಲ್ದಾರರಾದ ಪಿ ಬಾಬು ವಹಿಸಿದ್ದರು. ಸಂಸ್ಥೆಯ ಗೌರವ ಸಲಹೆಗಾರರಾದ ಕೆ ಕೆ ಪೇಜಾವರ ಹಾಗೂ ಜಗದೀಶ್ಚಂದ್ರ ಅಂಚನ್ ಜೊತೆಗಿದ್ದರು