ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಭಾರೀ ಮಳೆಯಾಗುತ್ತಿದ್ದು,ಇನ್ನು 5 ದಿನ ಮಳೆ ಮುಂದುವರೆಯಲಿದೆ. ಹವಾಮಾನ ಇಲಾಖೆಯು ಕರಾವಳಿ ಮತ್ತು ದಕ್ಷಿಣ ಒಳನಾಡು ಸೇರಿ ರಾಜ್ಯದ 7 ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಿದೆ.



ಉ.ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ಒಟ್ಟು 7 ಜಿಲ್ಲೆಗಳಲ್ಲಿ ರಾತ್ರಿಯಲ್ಲಿ ಅತಿ ಹೆಚ್ಚು ಮಳೆ, ಆಲಿಕಲ್ಲು ಮಳೆಯಾಗಲಿದೆ. ಈ ಏಳು ಜಿಲ್ಲೆಗಳಲ್ಲಿ ಪ್ರವಾಹವಾಗುವ ಸಾಧ್ಯತೆ ಇದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
