ಬಂಟ್ವಾಳ: ಭಾರೀ ಮಳೆಯಿಂದಾಗಿ ಕಾರೊಂದು ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಗುದ್ದಿದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಬಿ.ಸಿ ರೋಡ್ ಬಳಿ ನಡೆದಿದೆ.



ಮೃತಪಟ್ಟ ವ್ಯಕ್ತಿಯನ್ನು ಮಂಚಿ ಭಂಡಾರ ಕೊಟ್ಟಿಗೆ ನಿವಾಸಿ ತುಂಬೆಯ ಖಾಸಗಿ ಆಸ್ಪತ್ರೆಯ ಕ್ಯಾಂಟೀನ್ ಸಿಬ್ಬಂದಿ ಜಯಂತ್ ಗೌಡ ಎಂದು ಗುರುತಿಸಲಾಗಿದೆ.

ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ವಿದ್ಯುತ್ ಕಂಬಕ್ಕೂ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ತೆರಳಿ ಪರುಶೀಲನೆ ನಡೆಸುತ್ತಿದ್ದಾರೆ.