ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಪೋಟ ಬೆದರಿಕೆ : ಭಟ್ಕಳದ ಯುವಕನ ಬಂಧನ

Prakhara News
1 Min Read

ಮಂಗಳೂರು: “Support madi bro Ullal masjid hathira bomb blast madthini” ಇನ್‌ಸ್ಟಾಗ್ರಾಂ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಕಾಮೆಂಟ್ ಮಾಡಿ ಧರ್ಮಗಳ ಮಧ್ಯೆ ದ್ವೇಷ ಹಾಗೂ ವೈಮನಸ್ಸು ಉಂಟುಮಾಡುವ ಪ್ರಯತ್ನ ನಡೆಸಿದ ವ್ಯಕ್ತಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಘಟನೆ ಸಂಬಂಧ ಮಂಗಳೂರು ನಗರ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಕ್ರೈಂ ನಂ. 41/2026ರಡಿ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 196(2), 197(2), 299, 353(2) ಅನ್ವಯ ಪ್ರಕರಣ ದಾಖಲಾಗಿದೆ.

ಬಂಧಿತನನ್ನು ಶಂಕ‌ರ್ ಮಸ್ತಪ್ಪ ಮೊಗೇರ್ (35), ದಿ.
ಮಸ್ತಪ್ಪ ಅವರ ಪುತ್ರ, ದೇವಿನಗರ, ಜಾಲಿ, ಭಟ್ಕಳ, ಉತ್ತರ ಕನ್ನಡ ನಿವಾಸಿ ಎಂದು ಗುರುತಿಸಲಾಗಿದೆ.

ಮಾ. 3ರಂದು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡ ಆರೋಪಿಯನ್ನು ದಸ್ತಗಿರಿ ಮಾಡಿ, ಕೃತ್ಯಕ್ಕೆ ಬಳಸಿದ ಮೊಬೈಲ್ ಫೋನ್‌ನ್ನು ವಶಪಡಿಸಿಕೊಂಡಿದೆ.
ಆರೋಪಿಯನ್ನು ಮಂಗಳೂರು ನಗರದ 7ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment