Home ಕರಾವಳಿ ಸುಳ್ಯ: ವಿವಾಹಿತೆ ಮಹಿಳೆಯ ಆತ್ಮಹತ್ಯೆ ಪ್ರಕರಣ- ಆರೋಪಿಗಳಿಗೆ ಜಾಮೀನು

ಸುಳ್ಯ: ವಿವಾಹಿತೆ ಮಹಿಳೆಯ ಆತ್ಮಹತ್ಯೆ ಪ್ರಕರಣ- ಆರೋಪಿಗಳಿಗೆ ಜಾಮೀನು

0

ಸುಳ್ಯ: ಉದ್ಯಮಿ ಸೊಸೆ ಐಶ್ವರ್ಯಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳಿಗೆ ಬೆಂಗಳೂರಿನ ಸಿಟಿ ಏಳನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿ ಐಶ್ವರ್ಯಾ ಮಾವ ಗಿರಿಯಪ್ಪ ಗೌಡ ಕಾಪಿಲ, ಅತ್ತೆ ಸೀತಮ್ಮ, ಗಂಡ ರಾಜೇಶ್, ಮೈದುನ ವಿಜಯ್, ಮೈದುನನ ಪತ್ನಿ ತಸ್ಮಯ್ ಅವರನ್ನು ಪೊಲೀಸರು ಗೋವಾದಲ್ಲಿ ಬಂಧಿಸಿದ್ದರು. ಇನ್ನುಳಿದ ಆರೋಪಿಗಳಾದ ಐಶ್ವರ್ಯಾ ಅವರ ತಂದೆಯ ಅಕ್ಕ ಗೀತಾ, ಅವರ ಪತಿ ರವೀಂದ್ರನಾಥ ಕೇವಳ ಹಾಗೂ ಅವರ ಪುತ್ರಿ ಲಿಪಿ ಅವರು ತಲೆಮರೆಸಿಕೊಂಡಿದ್ದರು.

ಇದೀಗ ಗೀತಾ, ರವೀಂದ್ರನಾಥ ಕೇವಳ ಹಾಗೂ ಲಿಪಿ ಅವರಿಗೆ ನಿರೀಕ್ಷಣಾ ಜಾಮೀನು ಲಭಿಸಿದೆ. ಆರೋಪಿಗಳ ಪರವಾಗಿ ನ್ಯಾಯವಾದಿ ರಾಜೇಶ್ ಕೆ.ಎಸ್.ಎನ್. ವಾದಿಸಿದ್ದರು.

LEAVE A REPLY

Please enter your comment!
Please enter your name here