BREAKING NEWS..! ಬಿ. ಸಿ ರೋಡ್ ಬಸ್ ಸ್ಟಾಂಡ್ ನಲ್ಲಿ ಮಾರಕಾಸ್ತ್ರದಿಂದ ಚುಚ್ಚಿ ಯುವತಿಯ ಕೊಲೆ..!

Prakhara News
1 Min Read

ಬಂಟ್ವಾಳ : ಬಿಸಿ ರೋಡ್‌ನ KSRTC ನೂತನ ಬಸ್ ನಿಲ್ದಾಣದ ಬಳಿ ಗುರುವಾರ ಸಂಜೆ ನಡೆದ ಘಟನೆ ಆತಂಕಕ್ಕೆ ಕಾರಣವಾಗಿದೆ. ಬಸ್‌ಗಾಗಿ ಕಾಯುತ್ತಿದ್ದ ಸುಮಾರು 21-25 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಹರಿತವಾದ ಆಯುಧದಿಂದ ಗಂಭೀರ ಹತ್ಯೆ ನಡೆಸಿ ಪರಾರಿಯಾಗಿದ ಘಟನೆ ನಡೆದಿದೆ.

ಮೃತ ಯುವತಿಯನ್ನು ಕಕ್ಕೆಪದವು ಪದವು ನಿವಾಸಿ ಬಾಳಪ್ಪ ಗೌಡರ ಮಗಳು ಲಾವಣ್ಯ ಎಂದು ತಿಳಿದು ಬಂದಿದೆ.ಯುವತಿಯನ್ನು ತಕ್ಷಣ ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ದಾಖಳಿಸಿದರು ಚಿಕಿತ್ಸೆ ಫಲಕಾರಿಯಾಗದೆ ಮೃತಾಪಟ್ಟಿದ್ದಾಳೆಂದು ತಿಳಿದುಬಂದಿದೆ.

ಮಾಹಿತಿ ತಿಳಿದ ಕೂಡಲೇ ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಆರೋಪಿಯ ಪತ್ತೆಗೆ ತನಿಖೆ ಆರಂಭಿಸಿದ್ದಾರೆ. ಘಟನೆಯ ನಿಖರ ಕಾರಣ ಹಾಗೂ ಹೆಚ್ಚಿನ ಮಾಹಿತಿ ತನಿಖೆಯ ಬಳಿಕ ತಿಳಿದುಬರಲಿದೆ.

Share This Article
Leave a Comment