ಮಂಗಳೂರು: 2012ರ ಜುಲೈ 28ರಂದು ಮಧ್ಯಾಹ್ನ ನೂರಾರು ಸಂಘ ಪರಿವಾರದ ಕಾರ್ಯಕರ್ತರು ಪಡೀಲ್ ಹೋಂ ಸ್ಟೇಗೆ ದಾಳಿ ಮಾಡಿ ಅಲ್ಲಿ ಬರ್ತಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ವಿಚಾರಣೆ ಆ.6ರಂದು ಜಿಲ್ಲಾ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯಲಿದ್ದು, ಅಂತಿಮ ತೀರ್ಪು ಇಂದು ಹೊರಬರುವ ಸಾಧ್ಯತೆ ಇದೆ. ಯುವಕ-ಯುವತಿಯರು ಹೋಂ ಸ್ಟೇನಲ್ಲಿ ತಂಗಿದ್ದು, ಬರ್ತಡೇ ಪಾರ್ಟಿಯಲ್ಲಿ ನಿರತರಾಗಿದ್ದವರ ಮೇಲೆ ಸಂಘ ಪರಿವಾರದ ಕಾರ್ಯಕರ್ತರು ದಾಳಿ ನಡೆಸಿ ತೀವ್ರತರದ ಹಲ್ಲೆ ನಡೆಸಿರುವುದಾಗಿ ಸಂತ್ರಸ್ತರು ದೂರು ನೀಡಿದ ಹಿನ್ನೆಲೆಯಲ್ಲಿ ದೂರು ದಾಖಲಾಗಿ ತ್ತು. ಅಂತಿಮವಾಗಿ ಪೊಲೀಸರು 44 ಮಂದಿಯ ಮೇಲೆ ಆರೋಪ ಪಟ್ಟಿಯನ್ನು ದಾಖಲಿಸಿ ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ದಾಳಿ ಘಟನೆಯನ್ನು ಚಿತ್ರೀಕರಿಸಲು ತೆರಳಿದ್ದ ದ ಇಬ್ಬರು ಮಾಧ್ಯಮದ ವ್ಯಕ್ತಿಗಳ ಹೆಸರನ್ನು ಕೂಡಾ ಅವರು ಪೊಲೀಸರಿಗೆ ಮಾಹಿತಿ ನೀಡಲಿಲ್ಲ ಎಂಬ ಕಾರಣಕ್ಕಾಗಿ ಆರೋಪ ಪಟ್ಟಿಯಲ್ಲಿ ಸೇರಿಸಲಾಗಿತ್ತು. ಘಟನೆ ನಡೆದು ದೀರ್ಘ ವಿಚಾರಣೆ ಬಳಿಕ ಅಂದರೆ 12 ವರ್ಷಗಳ ಬಳಿಕ ಅಂತಿಮ ತೀರ್ಪು ಮಂಗಳವಾರ ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


