
ಪುತ್ತೂರು: ಸಂಚಾರ ಪೊಲೀಸ್ ಠಾಣೆಯವರು ತುರ್ತು ಸಂದರ್ಭದಲ್ಲಿ ಕಂಪ್ಯೂಟರ್ ಬೇಡಿಕೆ ಇಟ್ಟಾಗ ಅದಕ್ಕೆ ಸ್ಪಂದಿಸಿದ ಜಿ. ಎಲ್ ಸಂಸ್ಥೆ ಠಾಣೆಗೆ ಅಗತ್ಯ ಕಂಪ್ಯೂಟರ್ ಕೊಡುಗೆಯಾಗಿ ನೀಡಿದ್ದು, ಈ ಕೊಡುಗೆಯನ್ನು ಸ್ಮರಿಸಿ ಜಿ.ಎಲ್ ಆಚಾರ್ಯ ಜ್ಯುವೆಲ್ಲರ್ ಸಂಸ್ಥೆಗೆ ಠಾಣೆಯಿಂದ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಲಾಯಿತು.
ಪುತ್ತೂರು ಸಂಚಾರ ಪೊಲೀಸ್ ಠಾಣೆಯ ಎ.ಎಸ್.ಐ ಚಿದಾನಂದ ಮತ್ತು ಹೆಡ್ಕಾನ್ಸ್ಟೇಬಲ್ ದಿನೇಶ್ ಅವರು ಜಿ.ಎಲ್.ಆಚಾರ್ಯ ಸಂಸ್ಥೆಗೆ ಭೇಟಿ ನೀಡಿ ಸಂಸ್ಥೆಯ ಆಡಳಿತ ನಿರ್ದೇಶಕ ಸುಧನ್ವ ಆಚಾರ್ಯ ಅವರಿಗೆ ಕೃತಜ್ಞತಾ ಪತ್ರ ನೀಡಿ ಅಭಿನಂದಿಸಿದರು.
ಈ ಸಂದರ್ಭ ಎಸ್.ಐ ಉದಯರವಿ ಉಪಸ್ಥಿತರಿದ್ದರು.


