
ಮಂಗಳೂರು: ಅಕ್ರಮವಾಗಿ ಗೋಮಾಂಸಗಳನ್ನು ತುಂಬಿಸಿ ವಾಹನದಲ್ಲಿ ಸಾಗಾಟ ಮಾಡುತ್ತಿದ್ದಾಗ ಹಿಂದೂ ಕಾರ್ಯಕರ್ತರು ಮಿಂಚಿನ ಕಾರ್ಯಾಚರಣೆ ನಡೆಸಿ ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನ ಕದ್ರಿ ದೇಗುಲದ ಬಳಿ ಇಂದು ಮುಂಜಾನೆ ನಡೆದಿದೆ.



ಟೆಂಪೋದಲ್ಲಿ ಅಕ್ರಮ ಗೋ ಮಾಂಸ ಸಾಗಾಟ ಮಾಡುತ್ತಿರುವ ಕುರಿತು ಭಜರಂಗದಳ ಕಾರ್ಯಕರ್ತರಿಗೆ ಮಾಹಿತಿ ದೊರಕಿತ್ತು. ಖಚಿತ ಮಾಹಿತಿಯ ಆಧಾರದಲ್ಲಿ ಅವರು ಕದ್ರಿ ದೇವಸ್ಥಾನದ ಬಳಿ ವಾಹನವನ್ನು ತಡೆದು ಪರಿಶೀಲನೆ ಮಾಡಿದಾಗ ಅದರಲ್ಲಿ ಗೋ ಮಾಂಸ ಇರುವುದು ಪತ್ತೆಯಾಗಿದೆ. ತಕ್ಷಣ ಅಲರ್ಟ್ ಆದ ಭಜರಂಗದಳ ಕಾರ್ಯಕರ್ತರು ಗೋಮಾಂಸ ಸಾಗಾಟ ಮಾಡುತ್ತಿದ್ದ ದುರುಳರನ್ನು ಹಿಡಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ ಸಂದರ್ಭ ವಾಹನದಲ್ಲಿ ಸುಮಾರು 100 ಕೆಜಿಗೂ ಅಧಿಕ ಗೋ ಮಾಂಸ ಇರುವುದು ಪತ್ತೆಯಾಗಿದೆ. ನಂತರ ಪೊಲೀಸರು ಗೋ ಮಾಂಸ ಹಾಗೂ ವಾಹನವನ್ನು ಜಫ್ತಿ ಮಾಡಿ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಈ ಕುರಿತು ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರೆಯುತ್ತಿದೆ.