ಮಂಗಳೂರು: ಬಯಲಾಯ್ತು ಕಾವೂರಿನ ಟೆಕ್ಕಿ ಶರ್ಮಿಳಾ ಸಾವಿನ ರಹಸ್ಯ! ಕೇಸ್ ನಲ್ಲಿ ಬಿಗ್ ಟ್ವಿಸ್ಟ್ಉಸಿರುಗಟ್ಟಿಸಿ ಕೊಂದಿದ್ದ ಕೇರಳ ಮೂಲದ 18ರ ಹರೆಯದ ಯುವಕ ಅರೆಸ್ಟ್
ಲೈಂಗಿಕವಾಗಿ ಸಹಕರಿಸಲು ನಿರಾಕರಿಸಿದ ಮಂಗಳೂರಿನ ಕಾವೂರು ನಿವಾಸಿ ಟೆಕ್ಕಿ ಶರ್ಮಿಳಾ (35) ಕೊಂದಿದ್ದ 18 ವರ್ಷದ…
ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ : ಮೂವರ ಮೇಲೆ ಹಲ್ಲೆ; ಪ್ರಕರಣ ದಾಖಲು…!!
ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತುಅವರಿಬ್ಬರುಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ…
ಕನ್ನಡ ಪ್ರಕಾಶಕಿ, ಸಾಹಿತಿ ಆಶಾ ರಘು ಆತ್ಮಹತ್ಯೆ
ಬೆಂಗಳೂರು: ಕನ್ನಡ ಪ್ರಕಾಶಕಿ ಮತ್ತು ಸಾಹಿತಿ ಆಶಾ ರಘು (46) ಅವರು ಶನಿವಾರ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ…
ಮಂಗಳೂರಿನಿಂದ ನನಗೆ ಕಲೆಕ್ಷನ್ ಬೇಡ: ಝೈಧ್ ಖಾನ್,ತುಳುನಾಡಿನ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಜಮೀರ್ ಅಹ್ಮದ್ ಪುತ್ರ
ಝೈಧ್ ಖಾನ್ ಅಭಿನಯದ "ಕಲ್ಟ್" ಕನ್ನಡ ಚಿತ್ರ ಇದೇ ಬರುವ ಜನವರಿ 23 ಕ್ಕೆ ರಿಲೀಸ್…
ಕೌಟುಂಬಿಕ ಕಲಹದಿಂದ ಮನನೊಂದು ಕಾರಿನಲ್ಲಿ ಪೆಟ್ರೋಲ್ ಸುರಿದು ಬಿಜೆಪಿ ಮುಖಂಡ ಆತ್ಮಹತ್ಯೆ .
ದಾವಣಗೆರೆ : ದಾವಣಗೆರೆಯಲ್ಲಿ ಬಿಜೆಪಿ ಮುಖಂಡರೊಬ್ಬರು ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳ ಆತ್ಮಹತ್ಯೆ ಯತ್ನದ…
ಮಂಗಳೂರು ; ಅಯ್ಯಪ್ಪ ಸ್ವಾಮಿಯ ಪೂಜೆ ವೇಳೆ ಚರ್ಮುರಿ ಅಂಗಡಿಗೆ ಟೊಮೇಟೊ ತಿನ್ನಲು ಬಂದ ದನಕ್ಕೆ ಚೂರಿ ಇರಿತ
ಮಂಗಳೂರು : ಎಡಪದವು ಪುಪಾಡಿಕಲ್ಲು ಎಂಬಲ್ಲಿ ಭಕ್ತರು ಅಯ್ಯಪ್ಪ ಸ್ವಾಮಿ ಬಿರಿ ( ಟೆಂಟ್ ) ಬಳಿ…
ಕಾರ್ಕಳ: ಪರಶುರಾಮ್ ಥೀಮ್ ಪಾರ್ಕ್ ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ- ಇಬ್ಬರು ಆರೋಪಿಗಳ ಬಂಧನ
ಉಡುಪಿ: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ…
ವಿಟ್ಲ: ಒಂದುಕೋಟಿ ರೂ ವೆಚ್ಚದ ಅಂಬೇಢ್ಕರ್ ಭವನಕ್ಕೆ ಶಿಲಾನ್ಯಾಸ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಹೆಚ್ಚು ಅನುದಾನವನ್ನು ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು, ಕಾಂಗ್ರೆಸ್ ಸರಕಾರ ದಲಿತರ ಅಭಿವೃದ್ದಿಗೆ ಕಟಿಬದ್ದವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಸಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಈಗಾಗಲೇ ೭೫ ಲಕ್ಷ ಅನುದಾನ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಬಾಕಿ ಅನುದಾನ ಬಿಡುಗಡೆಯಾಗಲಿದೆ. ಈ ಭಾಗದ ದಲಿತ ಸಮುದಾಯದ ಬಹಳ ವರ್ಷಗಳ ಬೇಡಿಕೆಯಾಗಿದ್ದ ಅಂಬೇಡ್ಕರ್ ಭವನದ ಕನಸನ್ನು ನನಸು ಮಾಡಲಾಗಿದೆ. ನೂತನವಾಗಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನ ದಲಿತ ಹಾಗೂ ಇತರೆ ಸಮುದಾಯದ ಕಾರ್ಯಗಳಿಗೂ ಬಳಕೆಯಾಗಲಿ ಎಂದು ಹೇಳಿದರು. ನೂತನ ಅಂಬೇಡ್ಕರ್ ಭವನಕ್ಕೆ ವಿಟ್ಲ ಪ್ರವಾಸಿ ಮಂದಿರದ ಬಳಿ ಜಾಗ ಕಾಯ್ದಿರಿಸಲಾಗಿದೆ ಆದರೆ ಈಜಾಗ ಅತ್ಯಂತ ಕಡಿಮೆಯಾಗಿದೆ, ಇಲ್ಲಿ ಭವನ ನಿರ್ಮಾಣವಾದರೆ ಪಾರ್ಕಿಂಗ್ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಒಕ್ಕೆತ್ತೂರಿನಲ್ಲಿ ರುವ ಸರಕಾರಿ ಜಾಗದಲ್ಲಿ ನಿರ್ಮಾಣ ಮಾಡುವ ಬಗ್ಗೆ ಆಲೋಚನೆ ಇದ್ದು ಅಲ್ಲಿ ಜಾಗದ ಕೊರತೆ ಇದ್ದಲ್ಲಿ ನಿಗಧಿತ ಸ್ಥಳದಲ್ಲೇ ಭವನದ ನಿರ್ಮಾಣವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ರಮನಾಥ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ, ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ದಲಿತ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸೇಸಪ್ಪ ಬೆದ್ರಕಾಡು, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಅಧ್ಯಕ್ಷ ಕರುಣಾಕರ್ ನಾಯಿತೊಟ್ಟು, ಶ್ರೀನಿವಾಸ್ ಶೆಟ್ಟಿ ವಿಟ್ಲ, ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್, ಶ್ರೀನಿವಾಸ್ ನಾಯಕ್, ಅಣ್ಣಪ್ಪ ಪುತ್ತೂರು, ಚಂಧ್ರಶೇಖರ, ಗೋಪಾಲ ನೇರಳಕಟ್ಟೆ, ಮೀನಾಕ್ಷಿ, ವಿಮಲ, ಮಂಜುಳಾ ಕೊಡಿಪ್ಪಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್ ಮೊದಲಾದವರು ಉಪಸ್ಥಿತರಿದ್ದರು. ರಾಮಣ್ಣ ಪಿಲಿಂಜ ಸ್ವಾಗತಿಸಿ ವಂದಿಸಿದರು.
ರಾಣಿ ಅಬ್ಬಕ್ಕ ಗೌರವಾರ್ಥ ಉಳ್ಳಾಲವನ್ನು ಹೆರಿಟೇಜ್ ವಿಲೇಜ್ ಆಗಿ ಗುರುತಿಸಲು ಸಂಸದ ಕ್ಯಾ. ಚೌಟ ಆಗ್ರಹ
ಮಂಗಳೂರು: ಸಾಧ್ಯತೆಗಳ ಸಾಗರವಾಗಿರುವ ದಕ್ಷಿಣ ಕನ್ನಡವು ದಶಕಗಳಿಂದ ಹಾಗೆಯೇ ಉಳಿದಿಕೊಂಡಿರುವ ಹಿನ್ನಲೆಯಲ್ಲಿ ಕರಾವಳಿ ಪ್ರವಾಸೋದ್ಯಮವನ್ನು ಜನ…
ಮಂಗಳೂರು : ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಚಿಂತನೆ ; ಡಿಸಿಎಂ ಡಿ.ಕೆ ಶಿವಕುಮಾರ್.
ಮಂಗಳೂರು : ಕರಾವಳಿ ಭಾಗದಲ್ಲಿ ಕೇರಳ ಗೋವಾ ಮಾದರಿಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿ ಮಾಡಬೇಕು ಪ್ರವಾಸೋದ್ಯಮ ಅಭಿವೃದ್ಧಿ ವಿಚಾರದಲ್ಲಿ…
