ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ (ಒಬಿಸಿ) ಮೋರ್ಚಾದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಉಪಾಧ್ಯಕ್ಷರಲ್ಲಿ ಓರ್ವರಾಗಿ ವಕೀಲರಾದ ರಾಘವೇಂದ್ರ ರಾವ್ ರವರು ಮರು ಆಯ್ಕೆಯಾಗಿದ್ದಾರೆ.



ವೃತ್ತಿಯಲ್ಲಿ ವಕೀಲರಾಗಿರುವ ರಾಘವೇಂದ್ರ ರಾವ್ ರವರು ಹಲವಾರು ಸಾಮಾಜಿಕ ಕಾರ್ಯಗಳಲ್ಲಿ ತನ್ನನು ತೊಡಗಿಸಿಕೊಂಡಿದ್ದು ಇತ್ತೀಚೆಗೆ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಕ್ಷಿಣ ಕನ್ನಡ ಜಿಲ್ಲಾ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಆಡಳಿತ ಮಂಡಳಿಯ ಸದಸ್ಯರಾಗಿ ಜಯಗಳಿಸಿರುತ್ತಾರೆ.




