ಬೆಂಗಳೂರಿನಲ್ಲಿ ದಾರುಣ ಘಟನೆ: ಪ್ರೀತಿಸಿ ಮದುವೆಯಾಗಿದ್ದ ಇಂಜಿನಿಯರ್ ಜೋಡಿ ಶವವಾಗಿ ಪತ್ತೆ, ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ..!

Prakhara News
1 Min Read

ಬೆಂಗಳೂರು : ಪ್ರೀತಿಸಿ ಮದುವೆಯಾಗಿದ್ದ ಸಾಫ್ಟ್‌ವೇರ್ ಮತ್ತು ಸಿವಿಲ್ ಇಂಜಿನಿಯರ್ ಜೋಡಿಯೊಂದು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ದಾರುಣವಾಗಿ ಕೊನೆಯಾದ ಘಟನೆ ಶುಕ್ರವಾರ ರಾಜಗೋಪಾಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಪತಿ, ತಾನೂ ನೇಣಿಗೆ ಶರಣಾಗಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆ ಮೂಲದ ಸುಮಂತ್ ಜೈನ್ (32) ಹಾಗೂ ಹುಬ್ಬಳ್ಳಿ ಮೂಲದ ಪದ್ಮಾವತಿ (29) ಮೃತಪಟ್ಟ ದಂಪತಿ.

ಕಳೆದ ರಾತ್ರಿ ಕೌಟುಂಬಿಕ ಕಲಹವಾಗಿತ್ತು. ಜಗಳ ವಿಕೋಪಕ್ಕೆ ತಿರುಗಿ ಪತ್ನಿಯನ್ನು ಸುಮಂತ್‌ ಕೊಲೆ ಮಾಡಿದ್ದಾನೆ. ನಂತರ ತನ್ನ ತಾಯಿಗೆ ನಾನು ಸಾಯುತ್ತಿದ್ದೇನೆ ಎಂದು ವಾಯ್ಸ್ ಮೆಸೇಜ್ ಕಳುಹಿಸಿದ್ದಾನೆ. ತನ್ನ ಪಿಎಫ್ ಹಣ ಹಾಗೂ ಮನೆಯಲ್ಲಿನ ವಸ್ತುಗಳು ತೆಗೆದುಕೊಂಡು ಹೋಗುವಂತೆ ವಾಯ್ಸ್ ಮೆಸೇಜ್ ಕಳುಹಿಸಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಂತ್ ಜೈನ್ ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರೆ, ಪತ್ನಿ ಪದ್ಮಾವತಿ ವೈಟ್‌ಫೀಲ್ಡ್‌ನ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿದ್ದರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇವರು, ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಹೆಗ್ಗನಹಳ್ಳಿಯ ರಾಜೇಶ್ವರಿ ನಗರದ ಬಾಡಿಗೆ ಮನೆಗೆ ಶಿಫ್ಟ್ ಆಗಿದ್ದರು.

ಶುಕ್ರವಾರ ರಾತ್ರಿ ದಂಪತಿ ನಡುವೆ ಕೌಟುಂಬಿಕ ವಿಚಾರವಾಗಿ ತೀವ್ರ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಸುಮಂತ್ ಪತ್ನಿ ಪದ್ಮಾವತಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ತನ್ನ ತಾಯಿಗೆ ಕೊನೆಯ ವಾಟ್ಸಾಪ್ ವಾಯ್ಸ್ ಮೆಸೇಜ್ ಕಳುಹಿಸಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುಡಿಆರ್ (UDR) ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share This Article
Leave a Comment