ಬ್ಯಾರಿ ಸಾಹಿತ್ಯ ಅಕಾಡೆಮಿ ಅಸ್ತಿತ್ವದಲ್ಲಿದೆಯೇ?” – ಕಾರ್ಯಚಟುವಟಿಕೆಗಳ ಸ್ಥಗಿತದ ಬಗ್ಗೆ ಸಾರ್ವಜನಿಕರಲ್ಲಿ ಸಂಶಯ ;ಮಹಮ್ಮದ್ ಅಸ್ಗರ್
ಕರ್ನಾಟಕ ಸರ್ಕಾರದ ಅಧೀನದಲ್ಲಿರುವ ಬ್ಯಾರಿ ಸಾಹಿತ್ಯ ಅಕಾಡೆಮಿಯು, ರಹೀಮ್ ಉಚ್ಚಿಲ್ ಅವರು ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಸದಾ…
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ ನ ಮೇಲ್ಛಾವಣಿ ಕದ್ದವರು ಕಾಂಗ್ರೆಸ್ ಬ್ರದರ್ಸ್: ಶಾಸಕ ಸುನಿಲ್ ಕುಮಾರ್ ಟೀಕೆ
ಉಡುಪಿ: ಪರಶುರಾಮ ಥೀಮ್ ಪಾರ್ಕ್ ಕಟ್ಟಡದಲ್ಲಿ ತಾಮ್ರದ ಹೊದಿಕೆ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಕಳ ನಗರ…
ವಿಟ್ಲ: ಒಂದುಕೋಟಿ ರೂ ವೆಚ್ಚದ ಅಂಬೇಢ್ಕರ್ ಭವನಕ್ಕೆ ಶಿಲಾನ್ಯಾಸ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ದಲಿತರ ವಿವಿಧ ಬೇಡಿಕೆಗಳನ್ನು ಈಡೇರಿಸುವ ಸಲುವಾಗಿ ಹೆಚ್ಚು ಅನುದಾನವನ್ನು ಬಿಡುಗಡೆಯಾಗಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು, ಕಾಂಗ್ರೆಸ್ ಸರಕಾರ ದಲಿತರ ಅಭಿವೃದ್ದಿಗೆ ಕಟಿಬದ್ದವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ರೈ ಹೇಳಿದರು. ಅವರು ವಿಟ್ಲದಲ್ಲಿ ಸುಮಾರು ಒಂದು ಕೋಟಿ ರೂ ವೆಚ್ಚದ ಅಂಬೇಡ್ಕರ್ ಭವನಕ್ಕೆ ಸಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಈಗಾಗಲೇ ೭೫ ಲಕ್ಷ ಅನುದಾನ ಮಂಜೂರಾಗಿದೆ, ಮುಂದಿನ ದಿನಗಳಲ್ಲಿ ಬಾಕಿ ಅನುದಾನ ಬಿಡುಗಡೆಯಾಗಲಿದೆ. ಈ ಭಾಗದ ದಲಿತ ಸಮುದಾಯದ ಬಹಳ ವರ್ಷಗಳ ಬೇಡಿಕೆಯಾಗಿದ್ದ ಅಂಬೇಡ್ಕರ್ ಭವನದ ಕನಸನ್ನು ನನಸು ಮಾಡಲಾಗಿದೆ. ನೂತನವಾಗಿ ನಿರ್ಮಾಣವಾಗಲಿರುವ ಅಂಬೇಡ್ಕರ್ ಭವನ ದಲಿತ ಹಾಗೂ ಇತರೆ ಸಮುದಾಯದ ಕಾರ್ಯಗಳಿಗೂ ಬಳಕೆಯಾಗಲಿ ಎಂದು ಹೇಳಿದರು. ನೂತನ ಅಂಬೇಡ್ಕರ್ ಭವನಕ್ಕೆ ವಿಟ್ಲ ಪ್ರವಾಸಿ ಮಂದಿರದ ಬಳಿ ಜಾಗ ಕಾಯ್ದಿರಿಸಲಾಗಿದೆ ಆದರೆ ಈಜಾಗ ಅತ್ಯಂತ ಕಡಿಮೆಯಾಗಿದೆ, ಇಲ್ಲಿ ಭವನ ನಿರ್ಮಾಣವಾದರೆ ಪಾರ್ಕಿಂಗ್ ಸಮಸ್ಯೆ ಎದುರಾಗುವ ಸಾಧ್ಯತೆ ಇದ್ದು ಒಕ್ಕೆತ್ತೂರಿನಲ್ಲಿ ರುವ ಸರಕಾರಿ ಜಾಗದಲ್ಲಿ ನಿರ್ಮಾಣ ಮಾಡುವ ಬಗ್ಗೆ ಆಲೋಚನೆ ಇದ್ದು ಅಲ್ಲಿ ಜಾಗದ ಕೊರತೆ ಇದ್ದಲ್ಲಿ ನಿಗಧಿತ ಸ್ಥಳದಲ್ಲೇ ಭವನದ ನಿರ್ಮಾಣವಾಗಲಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ವಿಟ್ಲ ಬ್ಲಾಕ್ ಅಧ್ಯಕ್ಷ ಪದ್ಮನಾಭ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ ಎಸ್ ಮಹಮ್ಮದ್, ಡಿಸಿಸಿ ಕಾರ್ಯದರ್ಶಿ ರಮನಾಥ ವಿಟ್ಲ, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ, ಪುತ್ತೂರು ತಾಲೂಕು ಅಕ್ರಮ ಸಕ್ರಮ ಸಮಿತಿ ಸದಸ್ಯರಾದ ರಾಮಣ್ಣ ಪಿಲಿಂಜ, ದಲಿತ ಸೇವಾ ಸಮಿತಿ ಜಿಲ್ಲಾ ಅಧ್ಯಕ್ಷ ಸೇಸಪ್ಪ ಬೆದ್ರಕಾಡು, ವಿಟ್ಲ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಅಧ್ಯಕ್ಷ ಕರುಣಾಕರ್ ನಾಯಿತೊಟ್ಟು, ಶ್ರೀನಿವಾಸ್ ಶೆಟ್ಟಿ ವಿಟ್ಲ, ಪಟ್ಟಣ ಪಂಚಾಯತ್ ಸದಸ್ಯ ಅಶ್ರಫ್, ಶ್ರೀನಿವಾಸ್ ನಾಯಕ್, ಅಣ್ಣಪ್ಪ ಪುತ್ತೂರು, ಚಂಧ್ರಶೇಖರ, ಗೋಪಾಲ ನೇರಳಕಟ್ಟೆ, ಮೀನಾಕ್ಷಿ, ವಿಮಲ, ಮಂಜುಳಾ ಕೊಡಿಪ್ಪಾಡಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಸುದರ್ಶನ್ ಪಡಿಯಾರ್ ಮೊದಲಾದವರು ಉಪಸ್ಥಿತರಿದ್ದರು. ರಾಮಣ್ಣ ಪಿಲಿಂಜ ಸ್ವಾಗತಿಸಿ ವಂದಿಸಿದರು.
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ
ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ…
ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ
ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ…
ನಟ ಉಪೇಂದ್ರ ಪ್ರಿಯಾಂಕ ದಂಪತಿ ಮೊಬೈಲ್ ಹ್ಯಾಕ್… ! ಹಣ ನೀಡದಂತೆ ಮನವಿ
ಬೆಂಗಳೂರು: ನಟ ಉಪೇಂದ್ರ ಪ್ರಿಯಾಂಕ ಮೊಬೈಲ್ ಹ್ಯಾಕ್ ಆಗಿದೆ ಎನ್ನಲಾಗಿದ್ದು, ಈ ಬಗ್ಗೆ ನಟ ಉಪೇಂದ್ರ…
ಮಂಗಳೂರು: ಹೆದ್ದಾರಿ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ- ಲಾರಿ ಹರಿದು ಸವಾರೆ ಮೃತ್ಯು
ಮಂಗಳೂರು: ರಸ್ತೆ ಗುಂಡಿಗೆ ಬಿದ್ದ ದ್ವಿಚಕ್ರ ವಾಹನ ಸವಾರೆ ಮೇಲೆಯೇ ಮೀನಿನ ಲಾರಿ ಹರಿದು, ಮಹಿಳೆ…
ಭಾರತೀಯ ಸೇನೆಗೆ ಸೇರ ಬಯಸೋರಿಗೆ ಗುಡ್ ನ್ಯೂಸ್: ಉಚಿತ ಮಾರ್ಗದರ್ಶನ, ತರಬೇತಿಗೆ ಅರ್ಜಿ ಆಹ್ವಾನ
ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಹಿಂದುಳಿದ…
ನಕಲಿ ಸುದ್ದಿಗಳ ವಿರುದ್ಧ ದ.ಕ ಪೊಲೀಸರಿಂದ ಎಚ್ಚರಿಕೆ ಸಂದೇಶ
ಮಂಗಳೂರು: ಕಳೆದ ಮೂರು ತಿಂಗಳಿನಿಂದ ಜಿಲ್ಲೆಯಲ್ಲಿ ಕೋಮು ಸಾಮರಸ್ಯ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆ ತಂದಿರುವ…
ಧರ್ಮಸ್ಥಳ ಕೇಸ್: ಉತ್ಖನನದ ವೇಳೆ 2 ಜಾಗದಲ್ಲಿ ಅಸ್ಥಿಪಂಜರ, ಮೂಳೆ, ಬುರುಡೆ ಪತ್ತೆ – ಗೃಹ ಸಚಿವ ಪರಮೇಶ್ವರ್
ಬೆಂಗಳೂರು: ಅಪರಿಚಿತನಿಂದ ಹೇಳಿಕೆ ಪಡೆದ ಬಳಿಕ ಮ್ಯಾಪಿಂಗ್ ಮಾಡಲಾಗಿತ್ತು. ಉತ್ಖನನ ನಡೆಸಿದ ಪೈಕಿ 2 ಜಾಗದಲ್ಲಿ…




