ಪುತ್ತೂರು: ಪುತ್ತೂರಿನ ಅಕ್ಷಯ ನಾಯಕ್ ನಿರ್ದೇಶಿಸಿದ ಜೆವಣ್ ಕೊಂಕಣಿ ಸಿನಿಮಾ 17ನೇ ಬೆಂಗಳೂರು ಅಂತಾರಾಷ್ಟೀಯ ಚಿತ್ರೋತ್ಸವದ ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ ಭಾರತೀಯ ಉಪಭಾಷಾ ವಿಭಾಗದಲ್ಲಿ ಪ್ರದರ್ಶನಗೊಳ್ಳಲು ಆಯ್ಕೆ ಆಗಿದ್ದು ಪುತ್ತೂರಿನ ಗೌರವಕ್ಕೊಂದು ಗರಿ ಮೂಡಿದ ಸುದ್ಧಿ ಬಂದಿದೆ.ಚಿತ್ರವು ಬೆಂಗಳೂರಿನ ಲುಲು ಮಾಲ್ ನಲ್ಲಿ ಪ್ರದರ್ಶನಗೊಳ್ಳಲಿದೆ.


ಈಗಾಗಲೇ ಮಂಗಳೂರು, ಉಡುಪಿ, ಪುತ್ತೂರು, ಕುಂದಾಪುರ, ಹುಬ್ಬಳ್ಳಿ, ಬೆಂಗಳೂರು, ಮುಂಬೈ, ಶಿವಮೊಗ್ಗದಲ್ಲಿ ಪ್ರದರ್ಶನ ಕಂಡಿದ್ದು, ಕುವೈತ್, ಅರಿಝೋನಾ, ಮೆಲ್ಬೋರ್ನ್, ಕ್ಯಾಲಿಫೋರ್ನಿಯಾಗಳಲ್ಲೂ ಪ್ರದರ್ಶನ ಕಂಡು ಪ್ರೇಕ್ಷಕರನ್ನು ರಂಜಿಸಿದೆ.
“ಅನ್ಸಂಗ್ ಇನ್ಕ್ರೆಡಿಬಲ್ ಇಂಡಿಯಾ – ಕಡಿಮೆ ತಿಳಿದಿರುವ ಭಾಷೆಗಳಿಂದ ಚಲನಚಿತ್ರಗಳು” ಎಂಬ ಶೀರ್ಷಿಕೆಯ ಸ್ಪರ್ಧಾತ್ಮಕವಲ್ಲದ ವಿಭಾಗಕ್ಕಾಗಿ ಉತ್ಸವದ ಸಲಹಾ ಸಮಿತಿಯು “ಜೆವಣ್” ಅನ್ನು ಆಯ್ಕೆ ಮಾಡಿದೆ. ಈ ವಿಶೇಷ ವಿಭಾಗವು ಪ್ರಾದೇಶಿಕ ಮತ್ತು ಕಡಿಮೆ ಪ್ರಾತಿನಿಧ್ಯ ಹೊಂದಿರುವ ಭಾರತೀಯ ಭಾಷೆಗಳಿಂದ ಸಿನಿಮೀಯ ಧ್ವನಿಗಳನ್ನು ಆಚರಿಸುತ್ತದೆ, ಅವುಗಳ ಸಾಂಸ್ಕೃತಿಕ ಆಳ ಮತ್ತು ಕಥೆ ಹೇಳುವ ಶ್ರೀಮಂತಿಕೆಯನ್ನು ಎತ್ತಿ ತೋರಿಸುತ್ತದೆ.

ಜೆವಣ್ ಚಿತ್ರದ ಬಗ್ಗೆ
ಹಾಸ್ಯಕ್ಕಾಗಿಯೇ ಕೊಂಕಣಿ ಭಾಷೆಯಲ್ಲಿ ತಯಾರಾಗಿರುವ ಒಂದು ಕೌಟುಂಬಿಕ ಚಿತ್ರ. ಹಾಸ್ಯದ ಆಳ ಅಗಲಗಳನ್ನು ಪ್ರೇಕ್ಷಕರಿಗೆ ಉಣಬಡಿಸಲಿಕ್ಕಾಗಿಯೇ ಸಿದ್ಧವಾದಂತಿರುವ ಈ ಚಿತ್ರದಲ್ಲಿ ಘಟಾನುಘಟಿ ಕೊಂಕಣಿ ಭಾಷಿಕ ಕಲಾವಿದರು ಬಣ್ಣ ಹಚ್ಚಿದ್ದಾರೆ.

ಕ್ಯಾಟರಿಂಗ್ ಒಂದರಲ್ಲಿ ಕೆಲಸ ಮಾಡುವ ಮೂವರಲ್ಲಿ ಒಬ್ಬನಿಗೆ ಹೆಣ್ಣು ನೋಡಲು ಹೋಗುವಲ್ಲಿಂದ ಪ್ರಾರಂಭವಾಗುವ ಚಿತ್ರ ಹಲವು ಆಯಾಮಗಳ ಒಳಹೊಕ್ಕು ಮೋಸ, ವಂಚನೆಯ ಪ್ರಪಂಚದಲ್ಲಿ ತಮ್ಮ ಆಸೆ ಸಾಧಿಸಲಾಗದೆ ತೊಳಲಾಡುವ ಮೂವರು ಮತ್ತು ಅವರೊಂದಿಗೆ ಸೇರಿಕೊಳ್ಳುವ ಇತರ ಪಾತ್ರಗಳ ಅಪರೂಪದ ಕಥಾಹಂದರ ಕಥೆ ಹೇಳುತ್ತಾ ಸಾಗುತ್ತೆ.
ನಾಯಕನ ಪ್ರವೇಷದಿಂದ ಇನ್ನೊಂದು ಆಯಾಮಕ್ಕೆ ತೆರೆದುಕೊಳ್ಳುವ ಚಿತ್ರದ ಕಥಾವಸ್ತು ಆಕೆಯನ್ನೇ ವರಿಸುವುದರೊಂದಿಗೆ ಚಿತ್ರ ಮುಕ್ತಾಯವಾಗುತ್ತದೆ.ಇದರ ನಡುವೆ ಪೂರಕವಾಗಿ ಬರುವ ಪಾತ್ರಗಳು ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. ಇದಿಷ್ಟು ಜೇವಣ್ ಚಿತ್ರದ ಸಂಕ್ಷಿಪ್ತ ಕಥಾ ರೂಪ.
ಶ್ರೀ ಮಹಮ್ಮಯಿ ಸಿನಿ ಕ್ರಿಯೇಷನ್ಸ್ ಹಾಗು ಧಾತ್ರಿ ಸಿನಿ ಕಂಬೈನ್ ಲಾಂಛನದಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ಚಿತ್ರಕೆ, ಕುಂಬ್ಳೆ ವೆಂಕಟೇಶ್ ಭಟ್ ,ಕರೋಪಾಡಿ ಅಕ್ಷಯ್ ನಾಯಕ್ ನಿರ್ಮಾಪಕರಾಗಿದು , ಚಿತ್ರಕತೆ- ನಿರ್ದೇಶನ- ಸಂಕಲನ ಕರೋಪಾಡಿ ಅಕ್ಷಯ ನಾಯಕ್ ಮಾಡಿರುವುದು ರಾಜ್ಯ ಪ್ರಶಸ್ತಿ ಪುರಸ್ಕೃತ ನಟ ಎಮ್.ಕೆ ಮಠ ಮತ್ತು ಸೂರಜ್ ಭಟ್ ಬಂಟ್ವಾಳ್ ಇವರ ಕಥೆ ಸಂಭಾಷಣೆ ಇದ್ದು ಅರುಣ್ ರೈ ಪುತ್ತೂರು ಇವರ ಛಾಯಾಗ್ರಹಣ, ಚಿತ್ರಕ್ಕೆ ಗೀತ ಸಾಹಿತ್ಯವನ್ನು ಸೂರಜ್ ಭಟ್ ಬಂಟ್ವಾಳ್ ಹಾಗೂ ಸಾತ್ವಿಕ್ ಪಡಿಯರ್ ಬರೆದಿದ್ದು ಸಂಗೀತ ನಿರ್ದೇಶನ ಸಾತ್ವಿಕ್ ಪಡಿಯರ್ ನೀಡಿರುತ್ತಾರೆ. ಸುಮಂತ್ ಸಹ ನಿರ್ದೇಶಕರಾಗಿ ದುಡಿದಿದ್ದು, ಕೃಷ್ಣ ಪ್ರಸಾದ್ ಸಹಾಯಕ ಕ್ಯಾಮೆರಾ ನಿರ್ವಾಹಕರಾಗಿ, ಆಚಾರ್ಯ ಗುರುಪ್ರಸಾದ್ ಚಿತ್ರಕ್ಕೆ ಗಿಈಘಿ ಮಾಡಿರುತ್ತಾರೆ . ಚಿತ್ರದಲ್ಲಿ ಒಟ್ಟು ೩ ಹಾಡುಗಳಿದ್ದು , ಪ್ರಕಾಶ್ ಮಹಾದೇವನ, ಮಿಲನ್, ಹಾಗೂ ಅಪೇಷ ಪೈ ಹಾಡಿದರೆ,5.1 ಡಿ.ಟಿ.ಎಸ್ ಮಿಕ್ಸಿಂಗ್ & ಮಾಸ್ಟರಿಂಗ್ ನಿಕಿಲೇಶ್ ಬೆಂಗಳೂರ್ ಮಾಡಿರುತ್ತಾರೆ.
ಬಂಟ್ವಾಳ ಅಸುಪಾಸಿನಲ್ಲಿ ಸಿನಿಮಾದ ಚಿತ್ರೀಕರಣವನ್ನು ಮಾಡಲಾಗಿದೆ. ಚಿತ್ರವು ಹಾಸ್ಯ ಭರಿತ, ಮನೋರಂಜನೆ ನೀಡುವ ಜೊತೆಗೆ ಕೌಟುಂಬಿಕವಾಗಿ ನೋಡುವ ಸಿನಿಮಾ ಇದಾಗಿದೆ.ಕೊಂಕಣಿ ಸಮುದಾಯದಲ್ಲಿನ ಪ್ರತಿಭಾವಂತ ಕಲಾವಿದರ ದಂಡೇ ಈ ಚಿತ್ರದಲ್ಲಿದ್ದು ಈಗಾಗಲೇ ನಟನೆಯಲ್ಲಿ ಮುಂಚೂಣಿಯಲ್ಲಿರುವ ಹಲವು ನಾಟಕ, ಚಲನಚಿತ್ರ, ಧಾರಾವಾಹಿಯಲ್ಲಿ ನಟಿಸಿ ಹಲವು ಜನರ ಪ್ರಶಂಸೆಗೆ ಪಾತ್ರರಾದ ಕರಾವಳಿ ಮೂರು ಮುತ್ತು ಖ್ಯಾತಿ ಸತೀಶ್ ಪೈ ಕುಂದಾಪುರ, ಸಂತೋಷ್ ಪೈ, ಕುಂದಾಪುರ, ಕಾಮಿಡಿ ಕಿಲಾಡಿ ಖ್ಯಾತಿಯ ರಾಧೇಶ್ ಶೆಣೈ, ಕಲರ್ಸ್ ಕನ್ನಡ ಧಾರಾವಾಹಿಯ ಶಿಲ್ಪಾ ಕಾಮತ್ ನಾಯಕಿಯಗಿ ರಾಕೇಶ್ ಕಾಮತ್ ಪುತ್ತೂರು ನಾಯಕನಾಗಿ, ಸೂರಜ್ ಭಟ್ ಬಂಟ್ವಾಳ್, ರಾಮನಾಥ್ ನಾಯಕ್ ಪುತ್ತೂರು, ವೆಂಕಟೇಶ್ ಭಟ್ ಪುತ್ತೂರು, ಚಂದ್ರಕಾಂತ್ ಭಟ್ ಪುತ್ತೂರು, ವತ್ಸಲಾ ನಾಯಕ್ ಪುತ್ತೂರು, ಸುಲತಾ ನಾಯಕ್ ಪುತ್ತೂರು, ದಾಮೋದರ್ ಹೆಗಡೆ ಪುತ್ತೂರು, ಮಂಗೇಶ್ ಭಟ್ ವಿಟ್ಲ, ಕರೋಪಾಡಿ ವರುಣ್ ನಾಯಕ್ ,ದೀಪಕ್ ಪೈ ಉಪ್ಪಿನಂಗಡಿ,ಸ್ವಾತಿ ಅಕ್ಷಯ್ ನಾಯಕ್, ಸುಚಿತ್ರಾ ನಾಯಕ್ ,ನಟಿಸಿದ್ದು 45ಕ್ಕೂ ಮಿಕ್ಕಿ ತಾರಾಂಗಣ ಈ ಚಿತ್ರದಲ್ಲಿ ಇದೆ.ಈ ಚಿತ್ರವು ಸಾರಸ್ವತ ಕೊಂಕಣಿ (GSB ಕೊಂಕಣಿ ಚಲನಚಿತ್ರ) ಇತಿಹಾಸದಲ್ಲಿ ೯ ನೇ ಚಿತ್ರವಾಗಿದೆ.


