BREAKING NEWS…!ಪುತ್ತೂರು: ಕಾಲೇಜು ವಿದ್ಯಾರ್ಥಿ ಮೇಲೆ ಗುಂಪಿನಿಂದ ಹಲ್ಲೆ.. ಪ್ರಕರಣ ದಾಖಲು…!

Prakhara News
1 Min Read

ಪುತ್ತೂರು: ಕಾಲೇಜು ವಿದ್ಯಾರ್ಥಿಯೊಬ್ಬನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರು ಕಸಬಾ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ನಿವಾಸಿ ಆದಿಲ್ ಹುಸೈನ್ (21) ಅವರು ಪುತ್ತೂರಿನ ಖಾಸಗಿ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಏಪ್ರಿಲ್ 22ರಂದು ಸಂಜೆ ತನ್ನ ಸ್ನೇಹಿತರಾದ ಸುಹೇಲ್ ಹಾಗೂ ಅಝಾರ್ ಜೊತೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಚಹಾ ಕುಡಿಯುತ್ತಿದ್ದ ವೇಳೆ ಘಟನೆ ಸಂಭವಿಸಿದೆ.

ಈ ಸಂದರ್ಭದಲ್ಲಿ ಪಿರ್ಯಾದಿದಾರರ ಪರಿಚಯದ ಆರೋಪಿಗಳಾದ ಬಿ.ಕೆ. ಮೊಯಿನುದ್ದೀನ್, ಮೊಹದ್ ಸೇರಿದಂತೆ ಇತರ ಐವರು ಸ್ಥಳಕ್ಕೆ ಬಂದು ಆದಿಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಹಲ್ಲೆಯನ್ನು ಪ್ರಶ್ನಿಸಿದ ಸ್ನೇಹಿತರಿಗೆ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ಸಾರ್ವಜನಿಕರು ಗಲಾಟೆಯನ್ನು ನಿಲ್ಲಿಸಲು ಮುಂದಾದಾಗ ಆರೋಪಿಗಳು ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿ ಸ್ಥಳದಿಂದ ಪರಾರಿಯಾಗಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಆದಿಲ್ ಅವರನ್ನು ಪುತ್ತೂರು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವು ತಿಂಗಳುಗಳ ಹಿಂದೆ ಕಾಲೇಜಿನ ವಿದ್ಯಾರ್ಥಿಗಳ ನಡುವೆ ನಡೆದ ಗಲಾಟೆಯನ್ನು ಆದಿಲ್ ಬಿಡಿಸಿದ್ದ ಹಿನ್ನೆಲೆ ಈ ದಾಳಿ ನಡೆದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಕ್ರಮ ಸಂಖ್ಯೆ 49/2026ರಡಿ ಪ್ರಕರಣ ದಾಖಲಿಸಿಕೊಂಡು, ಭಾರತೀಯ ನ್ಯಾಯ ಸಂಹಿತೆ (BNS) 2023ರ ವಿವಿಧ ಕಲಂಗಳಡಿ ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article
Leave a Comment